ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತರು ನನ್ನ ಮತ್ತು ಪತ್ರಿಕಾ ವೃತ್ತಿಯ ಸಾಕ್ಷಿ ಪ್ರಜ್ಞೆ ಆಗಿದ್ದಾರೆ: ಕೆ.ವಿ.ಪ್ರಭಾಕರ್
ಪತ್ರಕರ್ತರಿಗೆ ಆರೋಗ್ಯ ಸಂಜೀವಿನಿ ಜಾರಿಗೆ ಸಕಲ ಪ್ರಯತ್ನ: ಕೆ.ವಿ.ಪಿ
ಬೆಂಗಳೂರು ನ 19:ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಾಲ್ವರೂ ಹಿರಿಯ ಪತ್ರಕರ್ತರು ನನ್ನ ಮತ್ತು ಪತ್ರಿಕಾ ವೃತ್ತಿಯ ಸಾಕ್ಷಿ ಪ್ರಜ್ಞೆ ಆಗಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕೃತಜ್ಞತೆ ಸಲ್ಲಿಸಿದರು. ರಾಜ್ಯೋತ್ಸವ ಮತ್ತು ಸುವರ್ಣ ಸಂಭ್ರಮ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಿಗೆ ಸಮ್ಮಾನಿಸಿ, ಗೌರವಿಸಿ ಮಾತನಾಡಿದರು. ರಾಜ್ಯೋತ್ಸವ ಪುಸ್ಕೃತರಾಗಿರುವ ಸನತ್ ಕುಮಾರ್ ಬೆಳಗಲಿ, ಎನ್.ಎಸ್.ಶಂಕರ್, ಕಾರಟಗಿ, ರಾಮಕೃಷ್ಣ ಅವರೆಲ್ಲರೂ ನನಗೆ ವೈಯುಕ್ತಿಕವಾಗಿ ಸಾಕ್ಷಿಪ್ರಜ್ಞೆ ಆಗಿದ್ದಾರೆ ಜೊತೆಗೆ ಪತ್ರಿಕಾ ವೃತ್ತಿಯ ಸಾಕ್ಷಿಪ್ರಜ್ಞೆ ಕೂಡ ಆಗಿದ್ದಾರೆ ಎಂದರು. ಸನತ್ ಕುಮಾರ್ ಬೆಳಗಲಿ ಮತ್ತು ಎನ್.ಎಸ್.ಶಂಕರ್ ಅವರಿಗೆ ಯಾವತ್ತೋ ರಾಜ್ಯೋತ್ಸವ ಪ್ರಶಸ್ತಿ ಬರಬೇಕಿತ್ತು. ಆದರೆ ನಮ್ಮ ಅವಧಿಯಲ್ಲಿ ಸಿಕ್ಕಿರುವುದು ನಮ್ಮ ಸೌಭಾಗ್ಯ. ಸುವರ್ಣ ಸಂಭ್ರಮ ಪ್ರಶಸ್ತಿ ಪುರಸ್ಕೃತರು ನನ್ನ ಸಹದ್ಯೋಗಿಗಳು, ಸಮಕಾಲೀನರೂ ಇದ್ದಾರೆ. ನಾವೆಲ್ಲಾ ಒಟ್ಟೊಟ್ಟಿಗೇ ಒಡನಾಡಿಕೊಂಡು ಪತ್ರಿಕೋದ್ಯಮದ ಭಾಗ ಆಗಿದ್ದವರು. ಎಲ್ಲರಿಗೂ ಶುಭಾಶಯಗಳನ್ನು ಕೋರುತ್ತೇನೆ. ಬೇರೆ ಬೇರೆ ಸಾಮಾಜಿಕ ಹಿನ್ನೆಲೆಯಿಂದ ಬಂದು ಪತ್ರಿಕಾ ವೃತ್ತಿಯನ್ನು ಅರ್ಥಪೂರ್ಣಗೊಳಿಸಿದ್ದಾರೆ, ಪತ್ರಿಕಾ ವೃತ್ತಿಯ ವಿಶ್ವಾಸಾರ್ಹತೆಯನ್ನು ಕಾಪಾಡಲು ಇಷ್ಟೂ ಮಂದಿ ತಮ್ಮ ಪಾಲನ್ನು ಒದಗಿಸಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.
ಆರೋಗ್ಯ ಸಂಜೀವಿನಿ ಜಾರಿಗೆ ಯತ್ನ
ಪತ್ರಕರ್ತ ಸಮುದಾಯಕ್ಕೆ ಮತ್ತು ಪತ್ರಕರ್ತರ ಕುಟುಂಬಗಳಿಗೆ ಆರೋಗ್ಯ ಸಂಜೀವಿನಿ ಸೌಲಭ್ಯವನ್ನು ಆದಷ್ಟು ಬೇಗ ಒದಗಿಸಿಕೊಡುವ ಬಗ್ಗೆ ಪ್ರಾಮಾಣಿಕ ಪ್ರಯತ್ನ ಆರಂಭಿಸಿದ್ದೇನೆ. ಮುಖ್ಯಮಂತ್ರಿಗಳು ನಮ್ಮ ಈ ಬೇಡಿಕೆಗೆ ಸ್ಪಂದಿಸುತ್ತಾರೆ ಎನ್ನುವ ಭರವಸೆ ಎಂದು ಆಶಯ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ರಾಜ್ಯೋತ್ಸವ ಪುರಸ್ಕೃತ ನಾಲ್ವರು ಮತ್ತು ಸುವರ್ಣ ಸಂಭ್ರಮ ಪ್ರಶಸ್ತಿ ಪುರಸ್ಕೃತರಾದ ಎಂಟು ಮಂದಿಗೆ ಸನ್ಮಾನಿಸಲಾಯಿತು. ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೆಷಾ ಖಾನುಂ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಶ್ರೀಧರ್ ಸೇರಿ ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…