ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತರು ನನ್ನ ಮತ್ತು ಪತ್ರಿಕಾ ವೃತ್ತಿಯ ಸಾಕ್ಷಿ ಪ್ರಜ್ಞೆ ಆಗಿದ್ದಾರೆ: ಕೆ.ವಿ.ಪ್ರಭಾಕರ್
ಪತ್ರಕರ್ತರಿಗೆ ಆರೋಗ್ಯ ಸಂಜೀವಿನಿ ಜಾರಿಗೆ ಸಕಲ ಪ್ರಯತ್ನ: ಕೆ.ವಿ.ಪಿ
ಬೆಂಗಳೂರು ನ 19:ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಾಲ್ವರೂ ಹಿರಿಯ ಪತ್ರಕರ್ತರು ನನ್ನ ಮತ್ತು ಪತ್ರಿಕಾ ವೃತ್ತಿಯ ಸಾಕ್ಷಿ ಪ್ರಜ್ಞೆ ಆಗಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕೃತಜ್ಞತೆ ಸಲ್ಲಿಸಿದರು. ರಾಜ್ಯೋತ್ಸವ ಮತ್ತು ಸುವರ್ಣ ಸಂಭ್ರಮ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಿಗೆ ಸಮ್ಮಾನಿಸಿ, ಗೌರವಿಸಿ ಮಾತನಾಡಿದರು. ರಾಜ್ಯೋತ್ಸವ ಪುಸ್ಕೃತರಾಗಿರುವ ಸನತ್ ಕುಮಾರ್ ಬೆಳಗಲಿ, ಎನ್.ಎಸ್.ಶಂಕರ್, ಕಾರಟಗಿ, ರಾಮಕೃಷ್ಣ ಅವರೆಲ್ಲರೂ ನನಗೆ ವೈಯುಕ್ತಿಕವಾಗಿ ಸಾಕ್ಷಿಪ್ರಜ್ಞೆ ಆಗಿದ್ದಾರೆ ಜೊತೆಗೆ ಪತ್ರಿಕಾ ವೃತ್ತಿಯ ಸಾಕ್ಷಿಪ್ರಜ್ಞೆ ಕೂಡ ಆಗಿದ್ದಾರೆ ಎಂದರು. ಸನತ್ ಕುಮಾರ್ ಬೆಳಗಲಿ ಮತ್ತು ಎನ್.ಎಸ್.ಶಂಕರ್ ಅವರಿಗೆ ಯಾವತ್ತೋ ರಾಜ್ಯೋತ್ಸವ ಪ್ರಶಸ್ತಿ ಬರಬೇಕಿತ್ತು. ಆದರೆ ನಮ್ಮ ಅವಧಿಯಲ್ಲಿ ಸಿಕ್ಕಿರುವುದು ನಮ್ಮ ಸೌಭಾಗ್ಯ. ಸುವರ್ಣ ಸಂಭ್ರಮ ಪ್ರಶಸ್ತಿ ಪುರಸ್ಕೃತರು ನನ್ನ ಸಹದ್ಯೋಗಿಗಳು, ಸಮಕಾಲೀನರೂ ಇದ್ದಾರೆ. ನಾವೆಲ್ಲಾ ಒಟ್ಟೊಟ್ಟಿಗೇ ಒಡನಾಡಿಕೊಂಡು ಪತ್ರಿಕೋದ್ಯಮದ ಭಾಗ ಆಗಿದ್ದವರು. ಎಲ್ಲರಿಗೂ ಶುಭಾಶಯಗಳನ್ನು ಕೋರುತ್ತೇನೆ. ಬೇರೆ ಬೇರೆ ಸಾಮಾಜಿಕ ಹಿನ್ನೆಲೆಯಿಂದ ಬಂದು ಪತ್ರಿಕಾ ವೃತ್ತಿಯನ್ನು ಅರ್ಥಪೂರ್ಣಗೊಳಿಸಿದ್ದಾರೆ, ಪತ್ರಿಕಾ ವೃತ್ತಿಯ ವಿಶ್ವಾಸಾರ್ಹತೆಯನ್ನು ಕಾಪಾಡಲು ಇಷ್ಟೂ ಮಂದಿ ತಮ್ಮ ಪಾಲನ್ನು ಒದಗಿಸಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.
ಆರೋಗ್ಯ ಸಂಜೀವಿನಿ ಜಾರಿಗೆ ಯತ್ನ
ಪತ್ರಕರ್ತ ಸಮುದಾಯಕ್ಕೆ ಮತ್ತು ಪತ್ರಕರ್ತರ ಕುಟುಂಬಗಳಿಗೆ ಆರೋಗ್ಯ ಸಂಜೀವಿನಿ ಸೌಲಭ್ಯವನ್ನು ಆದಷ್ಟು ಬೇಗ ಒದಗಿಸಿಕೊಡುವ ಬಗ್ಗೆ ಪ್ರಾಮಾಣಿಕ ಪ್ರಯತ್ನ ಆರಂಭಿಸಿದ್ದೇನೆ. ಮುಖ್ಯಮಂತ್ರಿಗಳು ನಮ್ಮ ಈ ಬೇಡಿಕೆಗೆ ಸ್ಪಂದಿಸುತ್ತಾರೆ ಎನ್ನುವ ಭರವಸೆ ಎಂದು ಆಶಯ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ರಾಜ್ಯೋತ್ಸವ ಪುರಸ್ಕೃತ ನಾಲ್ವರು ಮತ್ತು ಸುವರ್ಣ ಸಂಭ್ರಮ ಪ್ರಶಸ್ತಿ ಪುರಸ್ಕೃತರಾದ ಎಂಟು ಮಂದಿಗೆ ಸನ್ಮಾನಿಸಲಾಯಿತು. ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೆಷಾ ಖಾನುಂ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಶ್ರೀಧರ್ ಸೇರಿ ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…