ಪುತ್ತೂರು: ಶಾಲಾ ವಾಹನಕ್ಕೆ ಡಿಕ್ಕಿ ಹೊಡೆಯುದನ್ನು ತಪ್ಪಿಸಲು ಹೋಗಿ ಮದುವೆಗೆ ತೆರಳುತ್ತಿದ್ದ ಬಸ್ಸೊಂದು ರಸ್ತೆ ಅಂಚಿನಲ್ಲಿದ್ದ ಮನೆಗೆ ನುಗ್ಗಿದ ಘಟನೆ ಕಾವು ಸಮೀಪದ ಅಮ್ಚಿನಡ್ಕ ಎಂಬಲ್ಲಿ ನಡೆದಿದೆ. ಘಟನೆಯ ಪರಿಣಾಮ ಬಸ್ನಲ್ಲಿದ್ದವರಿಗೆ ಹಾಗೂ ಮನೆಯಲ್ಲಿದ್ದವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಮನೆ ಗೋಡೆ ಸಂಪೂರ್ಣ ಕುಸಿದಿದೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತವು ಸುಳ್ಯ ಪುತ್ತೂರು ರಸ್ತೆಯ ಅಮ್ಚಿನಡ್ಕ ಬಳಿ ಸಂಭವಿಸಿದೆ. ಮದುವೆಗೆ ತೆರಳುವ ಪ್ರಯಾಣಿಕರನ್ನು ಕೊಂಡು ಹೋಗುತ್ತಿದ್ದ ಬಸ್ ಪುತ್ತೂರಿನಿಂದ ಸುಳ್ಯದ ಕಡೆಗೆ ಹೋಗುತ್ತಿತ್ತು.
ಮಧುರ ಇಂಟರ್ ನ್ಯಾಷನಲ್ ಸ್ಕೂಲ್ಗೆ ಸೇರಿದ ಬಸ್ ಸುಳ್ಯದಿಂದ ಪರ್ಲ೦ಪಾಡಿಗೆ ಮಕ್ಕಳನ್ನು ಕರೆದುಕೊಂಡು ಬರಲು ತೆರಳುತ್ತಿದ್ದ ವೇಳೆ ಅಮ್ಮಿನಡ್ಕ ಬಳಿ ಪರ್ಲಂಪಾಡಿ ಕಡೆಗೆ ತಿರುವು ತೆಗೆದುಕೊಳ್ಳುತ್ತಿದ್ದ ವೇಳೆ ಮದುವೆ ಬಸ್ ಬಂದಿದ್ದು ಅದರ ಚಾಲಕ ಸ್ಕೂಲ್ ಬಸ್ಸಿಗೆ ಡಿಕ್ಕಿ ಹೊಡೆಯುವದನ್ನು ತಪ್ಪಿಸಲು ಇನ್ನೊಂದು ಬದಿಗೆ ವಾಹನವನ್ನು ತಿರುಗಿಸಿದ್ದಾರೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಅಂಚಿನಲ್ಲಿದ್ದ ಮನೆಗೆ ನುಗ್ಗಿದೆ. ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ ಎನ್ನಲಾಗಿದೆ. ಹೀಗಾಗಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಇನ್ನು ಬಸ್ನಲ್ಲಿದ್ದವರಿಗೂ ಸಣ್ಣಪುಟ್ಟ ತರಚು ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಮದುವೆ ಬಸ್ನ ಚಾಲಕ ಸ್ಕೂಲ್ ಬಸ್ಸಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಿದರಿಂದ ದೊಡ್ಡ, ಅನಾಹುತವೊಂದು ತಪ್ಪಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…