ಪುತ್ತೂರು: ಶಾಲಾ ವಾಹನಕ್ಕೆ ಡಿಕ್ಕಿ ಹೊಡೆಯುದನ್ನು ತಪ್ಪಿಸಲು ಹೋಗಿ ಮದುವೆಗೆ ತೆರಳುತ್ತಿದ್ದ ಬಸ್ಸೊಂದು ರಸ್ತೆ ಅಂಚಿನಲ್ಲಿದ್ದ ಮನೆಗೆ ನುಗ್ಗಿದ ಘಟನೆ ಕಾವು ಸಮೀಪದ ಅಮ್ಚಿನಡ್ಕ ಎಂಬಲ್ಲಿ ನಡೆದಿದೆ. ಘಟನೆಯ ಪರಿಣಾಮ ಬಸ್ನಲ್ಲಿದ್ದವರಿಗೆ ಹಾಗೂ ಮನೆಯಲ್ಲಿದ್ದವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಮನೆ ಗೋಡೆ ಸಂಪೂರ್ಣ ಕುಸಿದಿದೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತವು ಸುಳ್ಯ ಪುತ್ತೂರು ರಸ್ತೆಯ ಅಮ್ಚಿನಡ್ಕ ಬಳಿ ಸಂಭವಿಸಿದೆ. ಮದುವೆಗೆ ತೆರಳುವ ಪ್ರಯಾಣಿಕರನ್ನು ಕೊಂಡು ಹೋಗುತ್ತಿದ್ದ ಬಸ್ ಪುತ್ತೂರಿನಿಂದ ಸುಳ್ಯದ ಕಡೆಗೆ ಹೋಗುತ್ತಿತ್ತು.
ಮಧುರ ಇಂಟರ್ ನ್ಯಾಷನಲ್ ಸ್ಕೂಲ್ಗೆ ಸೇರಿದ ಬಸ್ ಸುಳ್ಯದಿಂದ ಪರ್ಲ೦ಪಾಡಿಗೆ ಮಕ್ಕಳನ್ನು ಕರೆದುಕೊಂಡು ಬರಲು ತೆರಳುತ್ತಿದ್ದ ವೇಳೆ ಅಮ್ಮಿನಡ್ಕ ಬಳಿ ಪರ್ಲಂಪಾಡಿ ಕಡೆಗೆ ತಿರುವು ತೆಗೆದುಕೊಳ್ಳುತ್ತಿದ್ದ ವೇಳೆ ಮದುವೆ ಬಸ್ ಬಂದಿದ್ದು ಅದರ ಚಾಲಕ ಸ್ಕೂಲ್ ಬಸ್ಸಿಗೆ ಡಿಕ್ಕಿ ಹೊಡೆಯುವದನ್ನು ತಪ್ಪಿಸಲು ಇನ್ನೊಂದು ಬದಿಗೆ ವಾಹನವನ್ನು ತಿರುಗಿಸಿದ್ದಾರೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಅಂಚಿನಲ್ಲಿದ್ದ ಮನೆಗೆ ನುಗ್ಗಿದೆ. ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ ಎನ್ನಲಾಗಿದೆ. ಹೀಗಾಗಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಇನ್ನು ಬಸ್ನಲ್ಲಿದ್ದವರಿಗೂ ಸಣ್ಣಪುಟ್ಟ ತರಚು ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಮದುವೆ ಬಸ್ನ ಚಾಲಕ ಸ್ಕೂಲ್ ಬಸ್ಸಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಿದರಿಂದ ದೊಡ್ಡ, ಅನಾಹುತವೊಂದು ತಪ್ಪಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…
ಒಮಾನ್ನಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಮೂಡಬಿದಿರೆ ಸಮೀಪದ ಸಾಣೂರು ಗ್ರಾಮದ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಸಾಣೂರು ಮೂಲಗುತ್ತು…
ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಪಾಂಡೀಲಿ ಎಂಬಲ್ಲಿ ವೃದ್ಧೆಯನ್ನು ಕೊಲೆ ಮಾಡಿ, ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ…