ಪುತ್ತೂರು: ಸುಮಾರು ಒಂದೂವರೆ ವರ್ಷದಿಂದ ಪುತ್ತೂರು ಎಸಿ ಆಗಿ ಗಿರೀಶ್ ನಂದನ್ ಕಾರ್ಯನಿರ್ವಹಿಸುತಿದ್ದರು. ಇವರು ಪುತ್ತೂರು ಸಹಾಯಕ ಆಯುಕ್ತರಾಗಿದ್ದು, ಎತ್ತಿನಹೊಳೆ ಯೋಜನೆಯ ಭೂಸ್ವಾಧೀನ ವಿಭಾಗಕ್ಕೆ ವರ್ಗಾವಣೆಗೊಂಡಿದ್ದ ಗಿರೀಶ್ ನಂದನ್ ಅವರ ವರ್ಗಾವಣೆ ಆದೇಶಕ್ಕೆ ಕರ್ನಾಟಕ ರಾಜ್ಯ ಆಡಳಿತಾತ್ಮಕ ಪ್ರಾಧಿಕಾರ ಅವಧಿಪೂರ್ಣ ವರ್ಗಾವಣೆ ಎಂಬ ನೆಲೆಯಲ್ಲಿ ತಡೆ ನೀಡಿರುವುದಾಗಿ ತಿಳಿದುಬಂದಿದೆ. ಗಿರೀಶ್ ಅವರ ವರ್ಗಾವಣೆಯ ಬಳಿಕ ಮಂಗಳೂರು ಕೆಎಐಡಿಬಿಯಲ್ಲಿ ಭೂಸ್ವಾಧೀನಾಧಿಕಾರಿಯಾಗಿದ್ದ ಮಹೇಶ್ಚಂದ್ರ ಅವರು ಬಂದು ಅಧಿಕಾರ ವಹಿಸಿಕೊಂಡಿದ್ದಾರೆ. ಇದೀಗ ಕೆಎಟಿಯಿಂದ ವರ್ಗಾವಣೆ ಆದೇಶಕ್ಕೆ ತಡೆ ದೊರೆತಿರುವುದರಿಂದ ಮುಂದಿನ ಬೆಳವಣಿಗೆಗಳನ್ನು ಕಾದುನೋಡಬೇಕಾಗಿದೆ. ಅಡ್ವಕೇಟ್ ವಿಶ್ಲೇಶ್ವರ ಯು. ಮತ್ತು ಶ್ರೀನಿವಾಸ ಎಂ.ಎ. ಇವರ ಪರವಾಗಿ ವಾದಿಸಿದ್ದರು.



