ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ರಾಷ್ಟ್ರೀಯ ಸಮಸ್ಯೆಯಾಗಿರುವ ನಕ್ಸಲ್ ಪಿಡುಗನ್ನು ಕೇವಲ ರಾಜ್ಯಕ್ಕೆ ಸೀಮಿತಗೊಳಿಸಿ ಮಾತನಾಡುವ ಸುನೀಲ್ ಕುಮಾರರದ್ದು ಬೌಧಿಕ ದಿವಾಳಿತನವಾಗಿದೆ: ಯೋಗೀಶ್ ಇನ್ನಾ

ನಕ್ಸಲ್ ಸಮಸ್ಯೆಯು ಕೇವಲ ಕರ್ನಾಟಕದಲ್ಲಿ ಮಾತ್ರ ಇರುವುದಲ್ಲ, ನಕ್ಸಲ್ ಸಮಸ್ಯೆಯು ದೇಶದಾದ್ಯಂತ ಇರುವಂತಹ ರಾಷ್ಟ್ರೀಯ ಸಮಸ್ಯೆಯಾಗಿದೆ. ದೇಶದ ಭದ್ರತೆಗೂ ನಕ್ಸಲೀಯರು ತೊಡಕನ್ನುಂಟು ಮಾಡುತ್ತಿದ್ದಾರೆ. ನಕ್ಸಲ್ ದಾಳಿಗಳಿಂದಾಗಿ ಹಲವಾರು ರಾಜ್ಯಗಳಲ್ಲಿ ನಮ್ಮ ಭದ್ರತಾ ಪಡೆಗಳ ಜವಾನರು ಪೊಲೀಸರು ಬಲಿಯಾಗಿರುವುದು ವರದಿಯಾಗುತ್ತಿವೆ. ನಕ್ಸಲ್ ದಾಳಿಗಳಿಗೆ ನಮ್ಮ ವೀರ ಸೈನಿಕರು, ಪೊಲೀಸರು ಬಲಿಯಾಗಿರುವ ಘಟನೆಗಳು ಇವೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಸವಾಲಾಗಿರುವ, ದೇಶದ ಭದ್ರತೆಗೆ ಕಂಟಕರಾಗಿರುವ ನಕ್ಸಲ್ ಸಮಸ್ಯೆಯ ಮೂಲೋತ್ಪಾಟನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದಾಗಿ ಕೆಲಸ ಮಾಡುವುದು ಸದ್ಯದ ಅನಿವಾರ್ಯತೆಯಾಗಿದೆ.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿಯೂ ನಕ್ಸಲ್ ಸಮಸ್ಯೆಯು ತಲೆದೋರುತ್ತಿದೆ. ಒಂದು ರಾಷ್ಟ್ರೀಯ ಸಮಸ್ಯೆ, ದೇಶದ ಭದ್ರತೆಗೆ ಸವಾಲಾಗಿರುವ ವಿಚಾರವನ್ನು ಕೇವಲ ಕರ್ನಾಟಕಕ್ಕೆ ಮಾತ್ರಾ ಸೀಮಿತಗೊಳಿಸಿ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ನಕ್ಸಲ್ ಸಮಸ್ಯೆ ಹುಟ್ಟಿಕೊಂಡಿದೆ ಎನ್ನುವ ಅರ್ಥದಲ್ಲಿ ಹೇಳಿಕೆ ನೀಡುವ ಸುನೀಲ್ ಕುಮಾರ್ ಅವರದ್ದು ಬೌಧಿಕ ದಿವಾಳಿತನವಾಗಿದೆ. ತಮ್ಮ ಮೇಲೆ ದಾಳಿ ನಡೆದರೂ ಜೀವದ ಹಂಗು ತೊರೆದು ನಕ್ಸಲ್ ದಾಳಿಯನ್ನು ದೈರ್ಯವಾಗಿ ಹಿಮ್ಮೆಟ್ಟಿಸಿದ ನಮ್ಮ ಪೋಲೀಸರ ಸಾಹಸೀ ಕಾರ್ಯವನ್ನು ಒಬ್ಬ ಶಾಸಕನಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಸುನೀಲ್ ಕುಮಾರ್ ಅವರು ಶ್ಲಾಘಿಸುವುದನ್ನು ಬಿಟ್ಟು ಅದರಲ್ಲೂ ಕಾಂಗ್ರೆಸ್ ಬಿಜೆಪಿ ಎಂದು ರಾಜಕೀಯದ ಬಣ್ಣ ಬಳಿಯಲು ಯತ್ನಿಸಿರುವುದು ನಮ್ಮ ಪೊಲೀಸರಿಗೆ ಮಾಡಿದ ಅವಮಾನವಾಗಿದೆ ಎಂದು ಕಾರ್ಕಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಯೋಗೀಶ್ ಇನ್ನಾ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!