ಜನ ಮನದ ನಾಡಿ ಮಿಡಿತ

Advertisement

ರಾಷ್ಟ್ರೀಯ ಸಮಸ್ಯೆಯಾಗಿರುವ ನಕ್ಸಲ್ ಪಿಡುಗನ್ನು ಕೇವಲ ರಾಜ್ಯಕ್ಕೆ ಸೀಮಿತಗೊಳಿಸಿ ಮಾತನಾಡುವ ಸುನೀಲ್ ಕುಮಾರರದ್ದು ಬೌಧಿಕ ದಿವಾಳಿತನವಾಗಿದೆ: ಯೋಗೀಶ್ ಇನ್ನಾ

ನಕ್ಸಲ್ ಸಮಸ್ಯೆಯು ಕೇವಲ ಕರ್ನಾಟಕದಲ್ಲಿ ಮಾತ್ರ ಇರುವುದಲ್ಲ, ನಕ್ಸಲ್ ಸಮಸ್ಯೆಯು ದೇಶದಾದ್ಯಂತ ಇರುವಂತಹ ರಾಷ್ಟ್ರೀಯ ಸಮಸ್ಯೆಯಾಗಿದೆ. ದೇಶದ ಭದ್ರತೆಗೂ ನಕ್ಸಲೀಯರು ತೊಡಕನ್ನುಂಟು ಮಾಡುತ್ತಿದ್ದಾರೆ. ನಕ್ಸಲ್ ದಾಳಿಗಳಿಂದಾಗಿ ಹಲವಾರು ರಾಜ್ಯಗಳಲ್ಲಿ ನಮ್ಮ ಭದ್ರತಾ ಪಡೆಗಳ ಜವಾನರು ಪೊಲೀಸರು ಬಲಿಯಾಗಿರುವುದು ವರದಿಯಾಗುತ್ತಿವೆ. ನಕ್ಸಲ್ ದಾಳಿಗಳಿಗೆ ನಮ್ಮ ವೀರ ಸೈನಿಕರು, ಪೊಲೀಸರು ಬಲಿಯಾಗಿರುವ ಘಟನೆಗಳು ಇವೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಸವಾಲಾಗಿರುವ, ದೇಶದ ಭದ್ರತೆಗೆ ಕಂಟಕರಾಗಿರುವ ನಕ್ಸಲ್ ಸಮಸ್ಯೆಯ ಮೂಲೋತ್ಪಾಟನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದಾಗಿ ಕೆಲಸ ಮಾಡುವುದು ಸದ್ಯದ ಅನಿವಾರ್ಯತೆಯಾಗಿದೆ.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿಯೂ ನಕ್ಸಲ್ ಸಮಸ್ಯೆಯು ತಲೆದೋರುತ್ತಿದೆ. ಒಂದು ರಾಷ್ಟ್ರೀಯ ಸಮಸ್ಯೆ, ದೇಶದ ಭದ್ರತೆಗೆ ಸವಾಲಾಗಿರುವ ವಿಚಾರವನ್ನು ಕೇವಲ ಕರ್ನಾಟಕಕ್ಕೆ ಮಾತ್ರಾ ಸೀಮಿತಗೊಳಿಸಿ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ನಕ್ಸಲ್ ಸಮಸ್ಯೆ ಹುಟ್ಟಿಕೊಂಡಿದೆ ಎನ್ನುವ ಅರ್ಥದಲ್ಲಿ ಹೇಳಿಕೆ ನೀಡುವ ಸುನೀಲ್ ಕುಮಾರ್ ಅವರದ್ದು ಬೌಧಿಕ ದಿವಾಳಿತನವಾಗಿದೆ. ತಮ್ಮ ಮೇಲೆ ದಾಳಿ ನಡೆದರೂ ಜೀವದ ಹಂಗು ತೊರೆದು ನಕ್ಸಲ್ ದಾಳಿಯನ್ನು ದೈರ್ಯವಾಗಿ ಹಿಮ್ಮೆಟ್ಟಿಸಿದ ನಮ್ಮ ಪೋಲೀಸರ ಸಾಹಸೀ ಕಾರ್ಯವನ್ನು ಒಬ್ಬ ಶಾಸಕನಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಸುನೀಲ್ ಕುಮಾರ್ ಅವರು ಶ್ಲಾಘಿಸುವುದನ್ನು ಬಿಟ್ಟು ಅದರಲ್ಲೂ ಕಾಂಗ್ರೆಸ್ ಬಿಜೆಪಿ ಎಂದು ರಾಜಕೀಯದ ಬಣ್ಣ ಬಳಿಯಲು ಯತ್ನಿಸಿರುವುದು ನಮ್ಮ ಪೊಲೀಸರಿಗೆ ಮಾಡಿದ ಅವಮಾನವಾಗಿದೆ ಎಂದು ಕಾರ್ಕಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಯೋಗೀಶ್ ಇನ್ನಾ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!