ನಕ್ಸಲ್ ಸಮಸ್ಯೆಯು ಕೇವಲ ಕರ್ನಾಟಕದಲ್ಲಿ ಮಾತ್ರ ಇರುವುದಲ್ಲ, ನಕ್ಸಲ್ ಸಮಸ್ಯೆಯು ದೇಶದಾದ್ಯಂತ ಇರುವಂತಹ ರಾಷ್ಟ್ರೀಯ ಸಮಸ್ಯೆಯಾಗಿದೆ. ದೇಶದ ಭದ್ರತೆಗೂ ನಕ್ಸಲೀಯರು ತೊಡಕನ್ನುಂಟು ಮಾಡುತ್ತಿದ್ದಾರೆ. ನಕ್ಸಲ್ ದಾಳಿಗಳಿಂದಾಗಿ ಹಲವಾರು ರಾಜ್ಯಗಳಲ್ಲಿ ನಮ್ಮ ಭದ್ರತಾ ಪಡೆಗಳ ಜವಾನರು ಪೊಲೀಸರು ಬಲಿಯಾಗಿರುವುದು ವರದಿಯಾಗುತ್ತಿವೆ. ನಕ್ಸಲ್ ದಾಳಿಗಳಿಗೆ ನಮ್ಮ ವೀರ ಸೈನಿಕರು, ಪೊಲೀಸರು ಬಲಿಯಾಗಿರುವ ಘಟನೆಗಳು ಇವೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಸವಾಲಾಗಿರುವ, ದೇಶದ ಭದ್ರತೆಗೆ ಕಂಟಕರಾಗಿರುವ ನಕ್ಸಲ್ ಸಮಸ್ಯೆಯ ಮೂಲೋತ್ಪಾಟನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದಾಗಿ ಕೆಲಸ ಮಾಡುವುದು ಸದ್ಯದ ಅನಿವಾರ್ಯತೆಯಾಗಿದೆ.
ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿಯೂ ನಕ್ಸಲ್ ಸಮಸ್ಯೆಯು ತಲೆದೋರುತ್ತಿದೆ. ಒಂದು ರಾಷ್ಟ್ರೀಯ ಸಮಸ್ಯೆ, ದೇಶದ ಭದ್ರತೆಗೆ ಸವಾಲಾಗಿರುವ ವಿಚಾರವನ್ನು ಕೇವಲ ಕರ್ನಾಟಕಕ್ಕೆ ಮಾತ್ರಾ ಸೀಮಿತಗೊಳಿಸಿ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ನಕ್ಸಲ್ ಸಮಸ್ಯೆ ಹುಟ್ಟಿಕೊಂಡಿದೆ ಎನ್ನುವ ಅರ್ಥದಲ್ಲಿ ಹೇಳಿಕೆ ನೀಡುವ ಸುನೀಲ್ ಕುಮಾರ್ ಅವರದ್ದು ಬೌಧಿಕ ದಿವಾಳಿತನವಾಗಿದೆ. ತಮ್ಮ ಮೇಲೆ ದಾಳಿ ನಡೆದರೂ ಜೀವದ ಹಂಗು ತೊರೆದು ನಕ್ಸಲ್ ದಾಳಿಯನ್ನು ದೈರ್ಯವಾಗಿ ಹಿಮ್ಮೆಟ್ಟಿಸಿದ ನಮ್ಮ ಪೋಲೀಸರ ಸಾಹಸೀ ಕಾರ್ಯವನ್ನು ಒಬ್ಬ ಶಾಸಕನಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಸುನೀಲ್ ಕುಮಾರ್ ಅವರು ಶ್ಲಾಘಿಸುವುದನ್ನು ಬಿಟ್ಟು ಅದರಲ್ಲೂ ಕಾಂಗ್ರೆಸ್ ಬಿಜೆಪಿ ಎಂದು ರಾಜಕೀಯದ ಬಣ್ಣ ಬಳಿಯಲು ಯತ್ನಿಸಿರುವುದು ನಮ್ಮ ಪೊಲೀಸರಿಗೆ ಮಾಡಿದ ಅವಮಾನವಾಗಿದೆ ಎಂದು ಕಾರ್ಕಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಯೋಗೀಶ್ ಇನ್ನಾ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…
ಒಮಾನ್ನಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಮೂಡಬಿದಿರೆ ಸಮೀಪದ ಸಾಣೂರು ಗ್ರಾಮದ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಸಾಣೂರು ಮೂಲಗುತ್ತು…
ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಪಾಂಡೀಲಿ ಎಂಬಲ್ಲಿ ವೃದ್ಧೆಯನ್ನು ಕೊಲೆ ಮಾಡಿ, ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ…