ಜನ ಮನದ ನಾಡಿ ಮಿಡಿತ

Advertisement

ಶಾಲಾ ಮಕ್ಕಳಿಗೆ ಮಕ್ಕಳಿಗೆ ಜಲ ಸಂರಕ್ಷಣೆ ಮತ್ತು ನೈರ್ಮಲ್ಯ ಬಗ್ಗೆ ಜಾಗೃತಿ

ಹುಣಸೂರು: ಜಿಲ್ಲಾ ಪಂಚಾಯಿತಿ ಮೈಸೂರು , ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮೈಸೂರು, ಉಪ ವಿಭಾಗ ಕೆಆರ್ ನಗರ ಹಾಗೂ ಭಗೀರಥ ಸಂಸ್ಥೆಯ ಸಹಯೋಗದೊಂದಿಗೆ ತಿಪ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಪ್ಪೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಮಕ್ಕಳಿಗೆ ಜಲ ಸಂರಕ್ಷಣೆ ಜಾಗೃತಿ ಮತು ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ಚಿತ್ರಕಲಾ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿ ಬಹುಮಾನ ವಿತರಣೆ ಮಾಡಲಾಯಿತು.

 


ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಲ ಜೀವನ್ ಮಿಷನ್ ಯೋಜನೆಯ ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ ಶ್ರೀ ಚೇತನ್ ಕುಮಾರ್ ರವರು ಮುಂದಿನ ಪೀಳಿಗೆಗೆ ಶುದ್ಧ ಸುರಕ್ಷಿತ ನೀರನ್ನು ಉಳಿಸಬೇಕಾದ ಜವಾಬ್ದಾರಿ ನಮ್ಮ ಎಲ್ಲರ ಮೇಲಿದೆ ಆದ್ದರಿಂದ ನಾವುಗಳು ನಮ್ಮ ಮನೆಗಳಲ್ಲಿ ನೀರನ್ನು ಅತಿ ಹೆಚ್ಚು ಪೋಲು ಮಾಡಬಾರದು ಹಾಗೂ ನೀರಿನ ಮೂಲಗಳ ಸುತ್ತ ತಿಪ್ಪೆ ಗುಂಡಿಗಳನ್ನು ಹಾಕಬಾರದು ಇದರ ಬಗ್ಗೆ ನಿಮ್ಮ ಪೋಷಕರಿಗೆ ನೀವುಗಳು ಮನವರಿಕೆ ಮಾಡಿಕೊಡಬೇಕು, ನೀವುಗಳು ಶಾಲಾ ಹಂತದಲ್ಲೇ ನೀರಿನ ಸಂರಕ್ಷಣೆ, ವೈಯಕ್ತಿಕ ಸ್ವಚ್ಛತೆ, ಹಾಗೂ ಪರಿಸರ ಸಂರಕ್ಷಣೆಯ ಕಡೆ ಹೆಚ್ಚು ಗಮನಹರಿಸಿ ಉತ್ತಮ ವಾತಾವರಣ ನಿರ್ಮಾಣಕ್ಕೆ ಕಂಕಣ ಬುದ್ಧರಾಗಬೇಕು ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ತಿಪ್ಪೂರು ಗ್ರಾಮ ಪಂಚಾಯಿತಿ ನೀರು ಮತ್ತು ನೈರ್ಮಲ್ಯ ಸಮಿತಿ ಅಧ್ಯಕ್ಷರಾದ ಶ್ರೀ ಸತ್ಯನಾರಾಯಣ , ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶ್ರೀಮತಿ ಮಂಗಳ, ತಾಂತ್ರಿಕ ಸಮಾಲೋಚಕರಾದ ಯಶವಂತ್, ISA ಜಿಲ್ಲಾ ತಂಡದ ನಾಯಕರಾದ ಮಹೇಶ್ ಎಚ್ ಪಿ, ಶಾಲ ಮುಖ್ಯ ಶಿಕ್ಷಕರಾದ ಶ್ರೀಮತಿ ಸುಜಾತ, SDMC ಅಧ್ಯಕ್ಷರಾದ ಕೃಷ್ಣೇಗೌಡ , ತಾಲ್ಲೂಕು ಸಂಯೋಜಕರಾದ ಸುನಿಲ್ ಕುಮಾರ್ ಹಾಗೂ ಭಗೀರಥ ಸಂಸ್ಥೆಯ ನಾಗೇಶ್ ಹಾಜರಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!