ಜನ ಮನದ ನಾಡಿ ಮಿಡಿತ

Advertisement

ಶಾಲಾ ಮಕ್ಕಳಿಗೆ ಮಕ್ಕಳಿಗೆ ಜಲ ಸಂರಕ್ಷಣೆ ಮತ್ತು ನೈರ್ಮಲ್ಯ ಬಗ್ಗೆ ಜಾಗೃತಿ

ಹುಣಸೂರು: ಜಿಲ್ಲಾ ಪಂಚಾಯಿತಿ ಮೈಸೂರು , ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮೈಸೂರು, ಉಪ ವಿಭಾಗ ಕೆಆರ್ ನಗರ ಹಾಗೂ ಭಗೀರಥ ಸಂಸ್ಥೆಯ ಸಹಯೋಗದೊಂದಿಗೆ ತಿಪ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಪ್ಪೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಮಕ್ಕಳಿಗೆ ಜಲ ಸಂರಕ್ಷಣೆ ಜಾಗೃತಿ ಮತು ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ಚಿತ್ರಕಲಾ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿ ಬಹುಮಾನ ವಿತರಣೆ ಮಾಡಲಾಯಿತು.

 


ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಲ ಜೀವನ್ ಮಿಷನ್ ಯೋಜನೆಯ ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ ಶ್ರೀ ಚೇತನ್ ಕುಮಾರ್ ರವರು ಮುಂದಿನ ಪೀಳಿಗೆಗೆ ಶುದ್ಧ ಸುರಕ್ಷಿತ ನೀರನ್ನು ಉಳಿಸಬೇಕಾದ ಜವಾಬ್ದಾರಿ ನಮ್ಮ ಎಲ್ಲರ ಮೇಲಿದೆ ಆದ್ದರಿಂದ ನಾವುಗಳು ನಮ್ಮ ಮನೆಗಳಲ್ಲಿ ನೀರನ್ನು ಅತಿ ಹೆಚ್ಚು ಪೋಲು ಮಾಡಬಾರದು ಹಾಗೂ ನೀರಿನ ಮೂಲಗಳ ಸುತ್ತ ತಿಪ್ಪೆ ಗುಂಡಿಗಳನ್ನು ಹಾಕಬಾರದು ಇದರ ಬಗ್ಗೆ ನಿಮ್ಮ ಪೋಷಕರಿಗೆ ನೀವುಗಳು ಮನವರಿಕೆ ಮಾಡಿಕೊಡಬೇಕು, ನೀವುಗಳು ಶಾಲಾ ಹಂತದಲ್ಲೇ ನೀರಿನ ಸಂರಕ್ಷಣೆ, ವೈಯಕ್ತಿಕ ಸ್ವಚ್ಛತೆ, ಹಾಗೂ ಪರಿಸರ ಸಂರಕ್ಷಣೆಯ ಕಡೆ ಹೆಚ್ಚು ಗಮನಹರಿಸಿ ಉತ್ತಮ ವಾತಾವರಣ ನಿರ್ಮಾಣಕ್ಕೆ ಕಂಕಣ ಬುದ್ಧರಾಗಬೇಕು ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ತಿಪ್ಪೂರು ಗ್ರಾಮ ಪಂಚಾಯಿತಿ ನೀರು ಮತ್ತು ನೈರ್ಮಲ್ಯ ಸಮಿತಿ ಅಧ್ಯಕ್ಷರಾದ ಶ್ರೀ ಸತ್ಯನಾರಾಯಣ , ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶ್ರೀಮತಿ ಮಂಗಳ, ತಾಂತ್ರಿಕ ಸಮಾಲೋಚಕರಾದ ಯಶವಂತ್, ISA ಜಿಲ್ಲಾ ತಂಡದ ನಾಯಕರಾದ ಮಹೇಶ್ ಎಚ್ ಪಿ, ಶಾಲ ಮುಖ್ಯ ಶಿಕ್ಷಕರಾದ ಶ್ರೀಮತಿ ಸುಜಾತ, SDMC ಅಧ್ಯಕ್ಷರಾದ ಕೃಷ್ಣೇಗೌಡ , ತಾಲ್ಲೂಕು ಸಂಯೋಜಕರಾದ ಸುನಿಲ್ ಕುಮಾರ್ ಹಾಗೂ ಭಗೀರಥ ಸಂಸ್ಥೆಯ ನಾಗೇಶ್ ಹಾಜರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!