ಹುಣಸೂರು: ಜಿಲ್ಲಾ ಪಂಚಾಯಿತಿ ಮೈಸೂರು , ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮೈಸೂರು, ಉಪ ವಿಭಾಗ ಕೆಆರ್ ನಗರ ಹಾಗೂ ಭಗೀರಥ ಸಂಸ್ಥೆಯ ಸಹಯೋಗದೊಂದಿಗೆ ತಿಪ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಪ್ಪೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಮಕ್ಕಳಿಗೆ ಜಲ ಸಂರಕ್ಷಣೆ ಜಾಗೃತಿ ಮತು ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ಚಿತ್ರಕಲಾ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿ ಬಹುಮಾನ ವಿತರಣೆ ಮಾಡಲಾಯಿತು.
ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಲ ಜೀವನ್ ಮಿಷನ್ ಯೋಜನೆಯ ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ ಶ್ರೀ ಚೇತನ್ ಕುಮಾರ್ ರವರು ಮುಂದಿನ ಪೀಳಿಗೆಗೆ ಶುದ್ಧ ಸುರಕ್ಷಿತ ನೀರನ್ನು ಉಳಿಸಬೇಕಾದ ಜವಾಬ್ದಾರಿ ನಮ್ಮ ಎಲ್ಲರ ಮೇಲಿದೆ ಆದ್ದರಿಂದ ನಾವುಗಳು ನಮ್ಮ ಮನೆಗಳಲ್ಲಿ ನೀರನ್ನು ಅತಿ ಹೆಚ್ಚು ಪೋಲು ಮಾಡಬಾರದು ಹಾಗೂ ನೀರಿನ ಮೂಲಗಳ ಸುತ್ತ ತಿಪ್ಪೆ ಗುಂಡಿಗಳನ್ನು ಹಾಕಬಾರದು ಇದರ ಬಗ್ಗೆ ನಿಮ್ಮ ಪೋಷಕರಿಗೆ ನೀವುಗಳು ಮನವರಿಕೆ ಮಾಡಿಕೊಡಬೇಕು, ನೀವುಗಳು ಶಾಲಾ ಹಂತದಲ್ಲೇ ನೀರಿನ ಸಂರಕ್ಷಣೆ, ವೈಯಕ್ತಿಕ ಸ್ವಚ್ಛತೆ, ಹಾಗೂ ಪರಿಸರ ಸಂರಕ್ಷಣೆಯ ಕಡೆ ಹೆಚ್ಚು ಗಮನಹರಿಸಿ ಉತ್ತಮ ವಾತಾವರಣ ನಿರ್ಮಾಣಕ್ಕೆ ಕಂಕಣ ಬುದ್ಧರಾಗಬೇಕು ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ತಿಪ್ಪೂರು ಗ್ರಾಮ ಪಂಚಾಯಿತಿ ನೀರು ಮತ್ತು ನೈರ್ಮಲ್ಯ ಸಮಿತಿ ಅಧ್ಯಕ್ಷರಾದ ಶ್ರೀ ಸತ್ಯನಾರಾಯಣ , ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶ್ರೀಮತಿ ಮಂಗಳ, ತಾಂತ್ರಿಕ ಸಮಾಲೋಚಕರಾದ ಯಶವಂತ್, ISA ಜಿಲ್ಲಾ ತಂಡದ ನಾಯಕರಾದ ಮಹೇಶ್ ಎಚ್ ಪಿ, ಶಾಲ ಮುಖ್ಯ ಶಿಕ್ಷಕರಾದ ಶ್ರೀಮತಿ ಸುಜಾತ, SDMC ಅಧ್ಯಕ್ಷರಾದ ಕೃಷ್ಣೇಗೌಡ , ತಾಲ್ಲೂಕು ಸಂಯೋಜಕರಾದ ಸುನಿಲ್ ಕುಮಾರ್ ಹಾಗೂ ಭಗೀರಥ ಸಂಸ್ಥೆಯ ನಾಗೇಶ್ ಹಾಜರಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…