ಜನ ಮನದ ನಾಡಿ ಮಿಡಿತ

Advertisement

ಜಲ ಸಂರಕ್ಷಣೆಗೆ ಮಕ್ಕಳು ಮುಂದಾಗಬೇಕು; ಜಲ ಜೀವನ್ ಮಿಷನ್ ಯೋಜನೆಯ ಜಿಲ್ಲಾ ಯೋಜನಾ ವ್ಯವಸ್ಥಾಪಕ ಚೇತನ್

ಜಿಲ್ಲಾ ಪಂಚಾಯಿತಿ ಮೈಸೂರು , ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮೈಸೂರು, ಉಪ ವಿಭಾಗ ಕೆಆರ್ ನಗರ ಹಾಗೂ ಭಗೀರಥ ಸಂಸ್ಥೆಯ ಸಹಯೋಗದೊಂದಿಗೆ ತಿಪ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಪ್ಪೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಲ ಜೀವನ್ ಮಿಷನ್ ಯೋಜನೆ ಅಡಿ ಮಕ್ಕಳಿಗೆ ಜಲ ಸಾಕ್ಷರತೆಯನ್ನು ಮೂಡಿಸುವ ಸಲುವಾಗಿ ನೀರು ಮತ್ತೆ ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ಚಿತ್ರಕಲಾ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿ ಬಹುಮಾನ ವಿತರಣೆ ಮಾಡಲಾಯಿತು.


ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಲ ಜೀವನ್ ಮಿಷನ್ ಯೋಜನೆಯ ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ  ಚೇತನ್ ಕುಮಾರ್ ರವರು ಮುಂದಿನ ಪೀಳಿಗೆಗೆ ಶುದ್ಧ ಸುರಕ್ಷಿತ ನೀರನ್ನು ಉಳಿಸಬೇಕಾದ ಜವಾಬ್ದಾರಿ ನಮ್ಮ ಎಲ್ಲರ ಮೇಲಿದೆ ಆದ್ದರಿಂದ ನಾವುಗಳು ನಮ್ಮ ಮನೆಗಳಲ್ಲಿ ನೀರನ್ನು ಅತಿ ಹೆಚ್ಚು ಪೋಲು ಮಾಡಬಾರದು ಹಾಗೂ ನೀರಿನ ಮೂಲಗಳ ಸುತ್ತ ತಿಪ್ಪೆ ಗುಂಡಿಗಳನ್ನು ಹಾಕಬಾರದು ಇದರ ಬಗ್ಗೆ ನಿಮ್ಮ ಪೋಷಕರಿಗೆ ನೀವುಗಳು ಮನವರಿಕೆ ಮಾಡಿಕೊಡಬೇಕು, ನೀವುಗಳು ಶಾಲಾ ಹಂತದಲ್ಲೇ ನೀರಿನ ಸಂರಕ್ಷಣೆ, ವೈಯಕ್ತಿಕ ಸ್ವಚ್ಛತೆ, ಹಾಗೂ ಪರಿಸರ ಸಂರಕ್ಷಣೆಯ ಕಡೆ ಹೆಚ್ಚು ಗಮನಹರಿಸಿ ಉತ್ತಮ ವಾತಾವರಣ ನಿರ್ಮಾಣಕ್ಕೆ ಕಂಕಣ ಬುದ್ಧರಾಗಬೇಕು ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ತಿಪ್ಪೂರು ಗ್ರಾಮ ಪಂಚಾಯಿತಿ ನೀರು ಮತ್ತು ನೈರ್ಮಲ್ಯ ಸಮಿತಿ ಅಧ್ಯಕ್ಷರಾದ ಶ್ರೀ ಸತ್ಯನಾರಾಯಣ , ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶ್ರೀಮತಿ ಮಂಗಳ, ತಾಂತ್ರಿಕ ಸಮಾಲೋಚಕರಾದ ಯಶವಂತ್, ISA ಜಿಲ್ಲಾ ತಂಡದ ನಾಯಕರಾದ ಮಹೇಶ್ ಎಚ್ ಪಿ, ಶಾಲ ಮುಖ್ಯ ಶಿಕ್ಷಕರಾದ ಶ್ರೀಮತಿ ಸುಜಾತ, SDMC ಅಧ್ಯಕ್ಷರಾದ ಕೃಷ್ಣೇಗೌಡ , ತಾಲ್ಲೂಕು ಸಂಯೋಜಕರಾದ ಸುನಿಲ್ ಕುಮಾರ್ ಹಾಗೂ ಭಗೀರಥ ಸಂಸ್ಥೆಯ ನಾಗೇಶ್ ಹಾಜರಿದ್ದರು

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!