ಅಡಿಕೆಯಿಂದ ಆರೋಗ್ಯಕ್ಕೆ ಹಾನಿಕಾರಕವಾಗಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮನವರಿಕೆಗೆ ಮನವಿ ಮಾಡುವಂತೆ ಜಿಲ್ಲೆಯ ಸಂಸದ ಕ್ಯಾ.ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ನಿಯಮಿತ ಇದರ ಅಧ್ಯಕ್ಷ ಪ್ರಭಾಕರ್ ಪ್ರಭು ಪತ್ರ ಬರೆದಿದ್ದಾರೆ.
ಕರ್ನಾಟಕ ರಾಜ್ಯದ ಕರಾವಳಿಯ ಜಿಲ್ಲೆಗಳಲ್ಲಿ ಹಲವಾರು ವರ್ಷಗಳಿಂದ ವಾಣಿಜ್ಯ ಬೆಳೆಯಾಗಿ ಬೆಳೆಸುತ್ತಿರುವ ತೋಟಾಗಾರಿಕೆ ಬೆಳೆಯಾಗಿರುವ ಅಡಿಕೆ ಬೆಳೆಯಿಂದಾಗಿ ರಾಜ್ಯದ ಲಕ್ಷಾಂತರ ಕುಟುಂಬಗಳು ಜೀವನ ನಡೆಸುತ್ತಿದ್ದು , ಈ ಬೆಳೆಯಿಂದಾಗಿ ದೇಶದ ಆರ್ಥಿಕತೆಗೂ ಶಕ್ತಿ ಬಂದಿರುತ್ತದೆ . ಕರಾವಳಿ ಜಿಲ್ಲೆಗಳಲ್ಲಿನ ಒಟ್ಟು ಭೂ ವಿಸ್ತಿರ್ಣದಲ್ಲಿ ಬಹುಪಾಲು ವಿಸ್ತಿರ್ಣ ಅಡಿಕೆ ಬೆಳೆಯಿಂದ ಕೂಡಿದ್ದು , ಬಹುಪಾಲು ರೈತರು ಅಡಿಕೆ ಬೆಳೆಯನ್ನು ಅವಲಂಬಿತರಾಗಿರುತ್ತಾರೆ . ಈ ಅಡಿಕೆ ಬೆಳೆಗಾರರಿಂದಲೇ ಕರಾವಳಿ ಜಿಲ್ಲೆಗಳು ಆರ್ಥಿಕವಾಗಿ ಸದೃಢಗೊಳ್ಳಲು ಕಾರಣವಾಗಿದೆ . ವಿಷಯ ಹೀಗಿರುವಾಗ ದಿಢಿರನೆ ಎಂಬಂತೆ ವಿಶ್ವ ಆರೋಗ್ಯ ಸಂಸ್ಥೆಯ ಅಂಗ ಸಂಸ್ಥೆಯೊಂದು ಅಡಿಕೆ ಸೇವನೆಯಿಂದ ಬಾಯಿಯ ಕ್ಯಾನ್ಸರ್ ಸಂಭವಿಸುತ್ತದೆ ಎಂದು ಅವೈಜ್ಞಾನಿಕವಾಗಿ ವರದಿ ನೀಡಿದ್ದು ಅಡಿಕೆ ಬೆಳೆಗಾರರು ತುಂಬಾ ಆತಂಕದ ಪರಿಸ್ಥಿತಿಯಲ್ಲಿದ್ದಾರೆ
ಈ ಅಡಿಕೆ ಬಗ್ಗೆ ದೇಶದಲ್ಲಿ ಹಲವಾರು ಸಂಶೋಧನೆಗಳನ್ನೂ ನಡೆಸಲಾಗಿದ್ದು
ಮತ್ತು ವಿವಿಧ ರೀತಿಯ ಪರೀಕ್ಷೆಗಳನ್ನು ಒಳಪಡಿಸಲಾಗಿದ್ದು ,ಎಲ್ಲಾ ಮೂಲಗಳಿಂದಲೂ ಅಡಿಕೆ ಸೇವನೆಯಿಂದ ಮನುಷ್ಯನ ಆರೋಗ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದೂ ಸಾಬೀತಾಗಿರುತ್ತದೆ.ಅಡಿಕೆ ಕ್ಯಾನ್ಸರ್ ಕಾರಕ ಅಲ್ಲ ಮತ್ತು ಆರೋಗ್ಯದಾಯಕವಾಗಿದೆ ಎಂಬುದಕ್ಕೆ ಸಂಶೋಧನೆಯಿಂದ ಪಡೆಯಲಾದ ಹಲವಾರು ಪೂರಕವಾದ ದಾಖಲೆಗಳು ಕರಾವಳಿಯ ಪ್ರತಿಷ್ಠಿತ ಅಡಿಕೆ ಖರೀದಿ ಕೇಂದ್ರವಾದ ಕ್ಯಾಂಪ್ಕೋ ಬಳಿ ಲಭ್ಯವಿದೆ.
ಅಡಿಕೆಯಿಂದ ಕ್ಯಾನ್ಸರ್ ಬರುತ್ತದೆ ಎಂದು ಅಡಿಕೆಯನ್ನು ನಿಷೇಧಿಸಲು ಶಿಫಾರಸ್ಸು ಮಾಡಿರುವ ಅವೈಜ್ಞಾನಿಕ ಸಂಸ್ಥೆಗೆ ಈಗಾಗಲೇ ಹೆಚ್ಚಿನ ಸಂಖ್ಯೆಯ ಜನ ಸಾಮಾನ್ಯರು ದಿನ ನಿತ್ಯ ಉಪಯೋಗಿಸುವ ವಿಷಕಾರಿ ಕುಡಿಯುವ ಪಾನೀಯಗಳಾದ ಸ್ಪೈಟ್ ,ಕೊಕೊ ಕೋಲಾ , ಪಾಂಟ , ತಮ್ಸಪ್ , ಮಿರಿಂಡ ಹಾಗೂ ಮದ್ಯಪಾನ ಸೇವನೆ ಸೇರಿದಂತೆ ಇನ್ನಿತರ ಆರೋಗ್ಯಕ್ಕೆ ಹಾನಿಕಾರಕವಾದವುಗಳನ್ನು ನಿಷೇಧ ಮಾಡಲು ಆಗುವುದಿಲ್ಲವೇ
ಆದುದರಿಂದ ಧಾರ್ಮಿಕ ಸಂಪ್ರದಾಯದಿಂದ ಹಿಡಿದು ದೇವತಾ ಕಾರ್ಯಗಳಿಗೆ ಸಹ ಅಡಿಕೆಯನ್ನು ಬಳಸಲಾಗುತ್ತಿದ್ದು ಅಡಿಕೆಯಿಂದ ಯಾವುದೇ ಹಾನಿಕಾರಕ ಉದ್ಬವಿಸುವುದಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಗೆ ಮನವರಿಕೆ ಮಾಡಿಕೊಳ್ಳಲು ದೇಶದ ಪ್ರಧಾನ ಮಂತ್ರಿ ಹಾಗೂ ಸಂಬಂಧಿಸಿದ ಕೇಂದ್ರ ಸಚಿವರುಗಳಿಗೆ ಮನದಟ್ಟು ಮಾಡಲು ಮನವಿ ಮಾಡಿದ್ದಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…