ಕಟೀಲು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಡಿ. 7 ರಂದು ಮುಂಬೈಯಲ್ಲಿ ನಡೆಯುವ ವಿಶ್ವಬಂಟರ ಸಮಾಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಲಕ್ಷ್ಮೀ ನಾರಾಯಣ ಅಸ್ರಣ್ಣ ಬಿಡುಗಡೆ ಗೊಳಿಸಿದರು.
ನಂತರ ಮಾತನಾಡಿದ ಅವರು ಐಕಳ ಹರೀಶ್ ಶೆಟ್ಟಿಯವರು ಬಂಡ ಸಮಾಜಕ್ಕೆ ದೊಡ್ಡ ಆಸ್ತಿ, ಅವರು ಅಧ್ಯಕ್ಷರಾಗಿ ಸಾಕಷ್ಟು ಸಮಾಜಮುಖಿ ಕೆಲಸವನ್ನು ಮಾಡಿದ್ದು ಮಾತ್ರವಲ್ಲದೆ, ಇತರ ಸಮಾಜದವರಿಗೂ ಸಹಕಾರ ನೀಡುತ್ತಾ ಬಂದಿದ್ದಾರೆ,ಬಂಟರ ಸಮ್ನೇಳನದ ಮೂಲಕ ಬಂಟ ಸಮಾಜವನ್ನು ಸೇರಿಸುವ ಕಾರ್ಯ ಅಭಿನಂದನೀಯ ಕಳೆದ ವರ್ಷ ಉಡುಪಿಯಲ್ಲಿ ನಡೆದ ಸಮ್ಮೇಳನದ ಅಮಂತ್ರಣ ಪತ್ರಿಕೆಯನ್ನು ಕೂಡ ಕಟೀಲು ದುರ್ಗೆಯ ಸನ್ನಿಧಿಯಲ್ಲಿ ಬಿಡುಗಡೆಗೊಂಡಿದೆ, ಕಾರ್ಯಕ್ರಮ ಯಶಸ್ಸಿಯಾಗಲಿ ಎಂದರು.
ಸಮಾರಂಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ, ಸಂತೋಷ್ ಕುಮಾರ್ ಹೆಗ್ಡೆ, ಭುವನಾಭಿರಾಮ ಉಡುಪ, ಶರತ್ ಶೆಟ್ಟಿ, ಸಂತೋಷ್ ಶೆಟ್ಟಿ ಶೆಡ್ಡೆ, ರತ್ನಾಕರ ಶೆಟ್ಟಿ ಎಕ್ಕಾರ್, ಅಶೋಕ್ ಕುಮಾರ್ ಶೆಟ್ಟಿ ಮುಲ್ಕಿ , ಬಾಲಕೃಷ್ಣ ರೈ ಕೊಲ್ಲಾಡಿ, ಸಾಯಿನಾಥ ಶೆಟ್ಟಿ, ತೋನ್ಸೆ ಮನೋಹರ್ ಶೆಟ್ಟಿ, ದೇವಪ್ಪ ಶೆಟ್ಟಿ ಸಾಲೆತ್ತೂರು, ಅಮರೇಶ್ ಸಾಲೆತ್ತೂರು, ಅರವಿಂದ ರೈ, ಅಜಿತ್ ಶೆಟ್ಟಿ ಬಜಪೆ, ಹರೀಶ್ ಶೆಟ್ಟಿ ಬಜಪೆ, ಸಂದೀಪ್ ಶೆಟ್ಟಿ ಎಕ್ಕೂರು, ತೇಜಸ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…