ಜನ ಮನದ ನಾಡಿ ಮಿಡಿತ

Advertisement

ಸುಳ್ಯ ದಲ್ಲಿ ಅಣ್ಣಾ-ತಮ್ಮಂದಿರ ನಡುವೆ ಆಸ್ತಿ ವಿವಾದ; ಕೊಲೆಯಲ್ಲಿ ಅಂತ್ಯ

ಸುಳ್ಯ: ಆಸ್ತಿ ವಿವಾದದ ಹಿನ್ನಲೆಯಲ್ಲಿ ಸಹೋದರರಿಂದಲೇ ಅಣ್ಣ ಕೊಲೆಯಾದ ದಾರುಣ ಘಟನೆ ಸಂಪಾಜೆ ಬಳಿಯ ಚೆಂಬು ಗ್ರಾಮದ ಕುದ್ರೇಪಾಯದಲ್ಲಿ ನಡೆದಿದೆ. ಅಣ್ಣ-ತಮ್ಮಂದಿರಾದ ಉಸ್ಮಾನ್, ಸತ್ತಾರ್, ರಫೀಕ್, ಇಸುಬು, ಅಬ್ಭಾಸ್ ಸಹೋದರರ ನಡುವೆ ಭೂ ವಿವಾದ ಪ್ರಾರಂಭವಾಗಿದ್ದು ಅಣ್ಣ ಉಸ್ಮಾನ್ ಕೊಲೆಯಲ್ಲಿ ಅಂತ್ಯವಾಗಿದೆ. ಸಹೋದರರಿಗೆ ಸೇರಿದ ಸುಮಾರು 50 ಎಕರೆ ಕೃಷಿ ಭೂಮಿ ಕುದ್ರೆಪಾಯದಲ್ಲಿದ್ದು ಜಾಗದ ತಕರಾರಿನಿಂದಾಗಿ ವಿವಾದವೆದ್ದಿತ್ತು. ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ಸಹೋದರರು ಸೇರಿ ಉಸ್ಮಾನ್ ಅವರನ್ನು ಚೂರಿಯಿಂದ ಇರಿದು ಕೊಂದಿರುವುದಾಗಿ ಮಾಹಿತಿ ಲಭಿಸಿದೆ.
ಅರಂತಡ್ಕ ನಿವಾಸಿ ಉಸ್ಮಾನ್ ಮೃತಪಟ್ಟವರು. ಸತ್ತಾರ್, ರಫೀಕ್ ಆರೋಪಿಗಳು. ಉಸ್ಮಾನ್ ಅವರು ಪತ್ನಿ, ಎರಡು ಹೆಣ್ಣು ಹಾಗೂ ಓರ್ವ ಗಂಡು ಮಗನನ್ನು ಅಗಲಿದ್ದಾರೆ. ಉಸ್ಮಾನ್ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!