ಜನ ಮನದ ನಾಡಿ ಮಿಡಿತ

Advertisement

ಸುಳ್ಯ ದಲ್ಲಿ ಅಣ್ಣಾ-ತಮ್ಮಂದಿರ ನಡುವೆ ಆಸ್ತಿ ವಿವಾದ; ಕೊಲೆಯಲ್ಲಿ ಅಂತ್ಯ

ಸುಳ್ಯ: ಆಸ್ತಿ ವಿವಾದದ ಹಿನ್ನಲೆಯಲ್ಲಿ ಸಹೋದರರಿಂದಲೇ ಅಣ್ಣ ಕೊಲೆಯಾದ ದಾರುಣ ಘಟನೆ ಸಂಪಾಜೆ ಬಳಿಯ ಚೆಂಬು ಗ್ರಾಮದ ಕುದ್ರೇಪಾಯದಲ್ಲಿ ನಡೆದಿದೆ. ಅಣ್ಣ-ತಮ್ಮಂದಿರಾದ ಉಸ್ಮಾನ್, ಸತ್ತಾರ್, ರಫೀಕ್, ಇಸುಬು, ಅಬ್ಭಾಸ್ ಸಹೋದರರ ನಡುವೆ ಭೂ ವಿವಾದ ಪ್ರಾರಂಭವಾಗಿದ್ದು ಅಣ್ಣ ಉಸ್ಮಾನ್ ಕೊಲೆಯಲ್ಲಿ ಅಂತ್ಯವಾಗಿದೆ. ಸಹೋದರರಿಗೆ ಸೇರಿದ ಸುಮಾರು 50 ಎಕರೆ ಕೃಷಿ ಭೂಮಿ ಕುದ್ರೆಪಾಯದಲ್ಲಿದ್ದು ಜಾಗದ ತಕರಾರಿನಿಂದಾಗಿ ವಿವಾದವೆದ್ದಿತ್ತು. ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ಸಹೋದರರು ಸೇರಿ ಉಸ್ಮಾನ್ ಅವರನ್ನು ಚೂರಿಯಿಂದ ಇರಿದು ಕೊಂದಿರುವುದಾಗಿ ಮಾಹಿತಿ ಲಭಿಸಿದೆ.
ಅರಂತಡ್ಕ ನಿವಾಸಿ ಉಸ್ಮಾನ್ ಮೃತಪಟ್ಟವರು. ಸತ್ತಾರ್, ರಫೀಕ್ ಆರೋಪಿಗಳು. ಉಸ್ಮಾನ್ ಅವರು ಪತ್ನಿ, ಎರಡು ಹೆಣ್ಣು ಹಾಗೂ ಓರ್ವ ಗಂಡು ಮಗನನ್ನು ಅಗಲಿದ್ದಾರೆ. ಉಸ್ಮಾನ್ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!