ಸುಳ್ಯ: ಆಸ್ತಿ ವಿವಾದದ ಹಿನ್ನಲೆಯಲ್ಲಿ ಸಹೋದರರಿಂದಲೇ ಅಣ್ಣ ಕೊಲೆಯಾದ ದಾರುಣ ಘಟನೆ ಸಂಪಾಜೆ ಬಳಿಯ ಚೆಂಬು ಗ್ರಾಮದ ಕುದ್ರೇಪಾಯದಲ್ಲಿ ನಡೆದಿದೆ. ಅಣ್ಣ-ತಮ್ಮಂದಿರಾದ ಉಸ್ಮಾನ್, ಸತ್ತಾರ್, ರಫೀಕ್, ಇಸುಬು, ಅಬ್ಭಾಸ್ ಸಹೋದರರ ನಡುವೆ ಭೂ ವಿವಾದ ಪ್ರಾರಂಭವಾಗಿದ್ದು ಅಣ್ಣ ಉಸ್ಮಾನ್ ಕೊಲೆಯಲ್ಲಿ ಅಂತ್ಯವಾಗಿದೆ. ಸಹೋದರರಿಗೆ ಸೇರಿದ ಸುಮಾರು 50 ಎಕರೆ ಕೃಷಿ ಭೂಮಿ ಕುದ್ರೆಪಾಯದಲ್ಲಿದ್ದು ಜಾಗದ ತಕರಾರಿನಿಂದಾಗಿ ವಿವಾದವೆದ್ದಿತ್ತು. ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ಸಹೋದರರು ಸೇರಿ ಉಸ್ಮಾನ್ ಅವರನ್ನು ಚೂರಿಯಿಂದ ಇರಿದು ಕೊಂದಿರುವುದಾಗಿ ಮಾಹಿತಿ ಲಭಿಸಿದೆ.
ಅರಂತಡ್ಕ ನಿವಾಸಿ ಉಸ್ಮಾನ್ ಮೃತಪಟ್ಟವರು. ಸತ್ತಾರ್, ರಫೀಕ್ ಆರೋಪಿಗಳು. ಉಸ್ಮಾನ್ ಅವರು ಪತ್ನಿ, ಎರಡು ಹೆಣ್ಣು ಹಾಗೂ ಓರ್ವ ಗಂಡು ಮಗನನ್ನು ಅಗಲಿದ್ದಾರೆ. ಉಸ್ಮಾನ್ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…