ಸುಳ್ಯ: ಆಸ್ತಿ ವಿವಾದದ ಹಿನ್ನಲೆಯಲ್ಲಿ ಸಹೋದರರಿಂದಲೇ ಅಣ್ಣ ಕೊಲೆಯಾದ ದಾರುಣ ಘಟನೆ ಸಂಪಾಜೆ ಬಳಿಯ ಚೆಂಬು ಗ್ರಾಮದ ಕುದ್ರೇಪಾಯದಲ್ಲಿ ನಡೆದಿದೆ. ಅಣ್ಣ-ತಮ್ಮಂದಿರಾದ ಉಸ್ಮಾನ್, ಸತ್ತಾರ್, ರಫೀಕ್, ಇಸುಬು, ಅಬ್ಭಾಸ್ ಸಹೋದರರ ನಡುವೆ ಭೂ ವಿವಾದ ಪ್ರಾರಂಭವಾಗಿದ್ದು ಅಣ್ಣ ಉಸ್ಮಾನ್ ಕೊಲೆಯಲ್ಲಿ ಅಂತ್ಯವಾಗಿದೆ. ಸಹೋದರರಿಗೆ ಸೇರಿದ ಸುಮಾರು 50 ಎಕರೆ ಕೃಷಿ ಭೂಮಿ ಕುದ್ರೆಪಾಯದಲ್ಲಿದ್ದು ಜಾಗದ ತಕರಾರಿನಿಂದಾಗಿ ವಿವಾದವೆದ್ದಿತ್ತು. ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ಸಹೋದರರು ಸೇರಿ ಉಸ್ಮಾನ್ ಅವರನ್ನು ಚೂರಿಯಿಂದ ಇರಿದು ಕೊಂದಿರುವುದಾಗಿ ಮಾಹಿತಿ ಲಭಿಸಿದೆ.
ಅರಂತಡ್ಕ ನಿವಾಸಿ ಉಸ್ಮಾನ್ ಮೃತಪಟ್ಟವರು. ಸತ್ತಾರ್, ರಫೀಕ್ ಆರೋಪಿಗಳು. ಉಸ್ಮಾನ್ ಅವರು ಪತ್ನಿ, ಎರಡು ಹೆಣ್ಣು ಹಾಗೂ ಓರ್ವ ಗಂಡು ಮಗನನ್ನು ಅಗಲಿದ್ದಾರೆ. ಉಸ್ಮಾನ್ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…