ಜನ ಮನದ ನಾಡಿ ಮಿಡಿತ

Advertisement

ನೋಟೀಸು ನೀಡದೆ ದಿಢೀರ್ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳನ್ನ ತರಾಟೆಗೆತ್ತಿಕೊಂಡ ವ್ಯಾಪಾರಿಗಳು

ದೇರಳಕಟ್ಟೆ ಬ್ಯಾರೀಸ್ ವಾಣಿಜ್ಯ ಕಟ್ಟಡದಿಂದ ಕುತ್ತಾರು ಪಂಡಿತ್ ಹೌಸ್ ವರೆಗಿನ ರಸ್ತೆಯನ್ನು ಅತಿಕ್ರಮಿಸಿದ್ದ ಅಂಗಡಿ, ಮಳಿಗೆಗಳನ್ನ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಪೊಲೀಸ್ ರಕ್ಷಣೆಯಲ್ಲಿ ಶುಕ್ರವಾರ ಜೆಸಿಬಿ ಬಳಸಿ ಕೆಡವಿ ಹಾಕಿದ್ದಾರೆ. ನೋಟೀಸು ನೀಡದೆ ದಿಢೀರ್ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳನ್ನ ವ್ಯಾಪಾರಿಗಳು ತರಾಟೆಗೆತ್ತಿಕೊಂಡಿದ್ದಾರೆ.

ಇದೇ ವೇಳೆ, ಲೋಕೋಪಯೋಗಿ ರಸ್ತೆ ಅತಿಕ್ರಮಿಸಿರುವ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯ ಬೋರ್ಡ್ ಗಳನ್ನ ಕೆಡವಲು ನಿಮಗೆ ತಾಕತ್ತಿಲ್ಲವೇ ಎಂದು ಅಧಿಕಾರಿಗಳನ್ನ ಪ್ರಶ್ನಿಸಿದ್ದಾರೆ. ಪೊಲೀಸರ ರಕ್ಷಣೆಯಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ನಾಗರಾಜ್ ಆರ್.ಬಿ, ಸಹಾಯಕ ಇಂಜಿನಿಯರ್ ದಾಸ್ ಪ್ರಕಾಶ್ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ ರಸ್ತೆ ಅತಿಕ್ರಮಿತ ಅಂಗಡಿ, ಮಳಿಗೆಗಳ ತೆರವು ಕಾರ್ಯಾಚರಣೆ ನಡೆಸಲಾಗಿದೆ. ದೇರಳಕಟ್ಟೆಯಿಂದ ಕುತ್ತಾರು, ಪಂಡಿತ್ ಹೌಸ್ ತನಕದ ರಸ್ತೆ ಇಕ್ಕೆಲಗಳನ್ನ ಅತಿಕ್ರಮಿಸಿದ ಅಂಗಡಿ, ಮಳಿಗೆಗಳನ್ನ ಜೆಸಿಬಿ ಯಂತ್ರದಿಂದ ಕೆಡವಲಾಗಿದೆ. ಅಂಗಡಿ, ಮಳಿಗೆಗಳ ಮುಂದೆ ರಸ್ತೆ ಅತಿಕ್ರಮಿಸಿ ಅಳವಡಿಸಲಾಗಿದ್ದ ಶೀಟ್ ಛಾವಣಿ, ಆವರಣ ಗೋಡೆ, ಇಂಟರ್ ಲಾಕ್ ಗಳನ್ನ ಕೆಡವಲಾಗಿದೆ.

ಅಧಿಕಾರಿಗಳು ಅಂಗಡಿಗಳ ಮಾಲೀಕರಿಗೆ ನೋಟೀಸು ನೀಡದೆ ದಿಢೀರ್ ಕಾರ್ಯಾಚರಣೆ ನಡೆಸಿದ್ದು ಅಂಗಡಿಗಳಲ್ಲಿ ಬಾಡಿಗೆದಾರರಾಗಿ ವ್ಯಾಪಾರ ನಡೆಸುತ್ತಿರುವ ನಮ್ಮಂತಹ ಬಡ ವ್ಯಾಪಾರಿಗಳು ನಷ್ಟ, ಸಮಸ್ಯೆ ಅನುಭವಿಸುವಂತಾಗಿದೆ ಎಂದು ವ್ಯಾಪಾರಸ್ಥರು ದೂರಿದ್ದಾರೆ. ಪಕ್ಕದಲ್ಲೇ ಇರುವ ಖಾಸಗಿ ಆಸ್ಪತ್ರೆಯವರು ರಸ್ತೆಯನ್ನ ಅತಿಕ್ರಮಿಸಿ ದೊಡ್ಡ ದೊಡ್ಡ ಬೋರ್ಡ್ ಗಳನ್ನ ಹಾಕಿದ್ದು ಉಳ್ಳವರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ತಾಕತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಲೋಕೋಪಯೋಗಿ ರಸ್ತೆ ಅತಿಕ್ರಮಿತ ಅಂಗಡಿ, ಮುಂಗಟ್ಟುಗಳಿಗೆ ನಾವು ಇಲಾಖೆಯಿಂದ ಕಳೆದ ಆರು ತಿಂಗಳಿಂದ ಮೂರು ಬಾರಿ ನೋಟೀಸು ನೀಡಿದ್ದೇವೆ. ಅಷ್ಟಲ್ಲದೆ ಅಂಗಡಿಗಳ ಗೋಡೆಗೂ ನೋಟೀಸನ್ನ ಅಂಟಿಸಿದ್ದೇವೆ. ಕೆಲ ಅಂಗಡಿ ಮಾಲೀಕರು ಅದನ್ನ ಲೆಕ್ಕಿಸದೆ ನೋಟೀಸೆ ಪೈಂಟ್ ಬಳಿದಿದ್ದಾರೆ. ರಸ್ತೆ ಅತಿಕ್ರಮಿತ ಮಳಿಗೆಗಳನ್ನ ತೆರವುಗೊಳಿಸಲು ನಮಗೆ ಸುಪ್ರೀಂ ಕೋರ್ಟ್ ಆದೇಶವಿದೆ. ಹಾಗಾಗಿ ತೆರವು ಕಾರ್ಯಾಚರಣೆ ನಡೆಸಿದ್ದೇವೆ ಎಂದು ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ದಾಸ್ ಪ್ರಕಾಶ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!