ಜನ ಮನದ ನಾಡಿ ಮಿಡಿತ

Advertisement

ಕಾರ್ಕಳ: ಹಾಳಾದ ಬೀಡಿ ಎಲೆ ವಿತರಣೆ: ಬೀಡಿ ಕಾರ್ಮಿಕರಿಂದ ಪ್ರತಿಭಟನೆ, ಕಂಪೆನಿಗೆ ಮುತ್ತಿಗೆ

ಉಡುಪಿ: ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಹಾಗೂ ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘಗಳ (ಸಿಐಟಿಯು) ನೇತೃತ್ವದಲ್ಲಿ ಇಂದು ಕಾರ್ಕಳದಲ್ಲಿ ಪ್ರತಿಭಟನೆ ನಡೆಸಿ ಕಂಪನಿಗೆ ಮುತ್ತಿಗೆ ಹಾಕಲಾಯಿತು.


ಹಲವು ಸಮಯದಿಂದ ಬೀಡಿ ಎಲೆ ಹಾಳಾಗಿದ್ದು, ಸರಿಪಡಿಸಲು ಹಲವು ಬಾರಿ ಎಚ್ಚರಿಕೆಯನ್ನು ನೀಡಲಾಗಿತ್ತು. ಅದರೂ ಎಚ್ಚೆತ್ತುಕೊಳ್ಳದ ಕಂಪನಿಯ ವಿರುದ್ಧ ಇಂದು ಸಂಘದ ಮುಖಂಡರು ಹಾಗೂ ಕಾರ್ಮಿಕರು ಸೇರಿ ಪ್ರತಿಭಟನೆ ನಡೆಸಿದರು. ಬಳಿಕ ಕಂಪನಿಗೆ ಮುತ್ತಿಗೆ ಹಾಕಲಾಯಿತು.
ಈ ವೇಳೆ ಸಮಜಾಯಿಷಿ ನೀಡಿದ ಕಂಪನಿಯ ಮ್ಯಾನೇಜರ್ , ಹಳೇ ಬೀಡಿ ಎಲೆ ಖಾಲಿ ಮಾಡಿದ್ದು ಈಗ ಹೊಸ ಎಲೆ ಪೂರೈಕೆಯಾಗಿದೆ. ಎರಡು ದಿನಗಳಲ್ಲಿ ಹೊಸ ಎಲೆಯನ್ನು ಕಾರ್ಮಿಕರಿಗೆ ವಿತರಿಸಲಾಗುವುದು ಎಂದು ಭರವಸೆ ನೀಡಿದರು. ನಂತರ ಸಂಘದ ಮುಖಂಡರು ಹಾಗೂ ಕಾರ್ಮಿಕರು ಎಲೆ ಸಂಸ್ಕರಿಸುವ ಗೋಡೌನ್ ಗೆ ಹೋಗಿ ಪರಿಶಿಲಿಸಿದರು.ಬಳಿಕ ಪ್ರತಿಭಟನೆಯನ್ನು ವಾಪಸು ಪಡೆಯಲಾಯಿತು.
ಪ್ರತಿಭಟನೆಯನ್ನುದ್ದೇಶಿಸಿ ಕಾರ್ಕಳ ತಾಲೂಕು ಬೀಡಿ ಕಾರ್ಮಿಕ ಸಂಘದ ಕಾರ್ಯದರ್ಶಿ ಕವಿರಾಜ್. ಎಸ್.ಕಾಂಚನ್, ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಉಪಾಧ್ಯಕ್ಷ ರಾದ ಬಲ್ಕೀಸ್,ಕಾರ್ಯದರ್ಶಿ ಉಮೇಶ್ ಕುಂದರ್ ಮಾತನಾಡಿದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!