ಉಡುಪಿ: ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಹಾಗೂ ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘಗಳ (ಸಿಐಟಿಯು) ನೇತೃತ್ವದಲ್ಲಿ ಇಂದು ಕಾರ್ಕಳದಲ್ಲಿ ಪ್ರತಿಭಟನೆ ನಡೆಸಿ ಕಂಪನಿಗೆ ಮುತ್ತಿಗೆ ಹಾಕಲಾಯಿತು.
ಹಲವು ಸಮಯದಿಂದ ಬೀಡಿ ಎಲೆ ಹಾಳಾಗಿದ್ದು, ಸರಿಪಡಿಸಲು ಹಲವು ಬಾರಿ ಎಚ್ಚರಿಕೆಯನ್ನು ನೀಡಲಾಗಿತ್ತು. ಅದರೂ ಎಚ್ಚೆತ್ತುಕೊಳ್ಳದ ಕಂಪನಿಯ ವಿರುದ್ಧ ಇಂದು ಸಂಘದ ಮುಖಂಡರು ಹಾಗೂ ಕಾರ್ಮಿಕರು ಸೇರಿ ಪ್ರತಿಭಟನೆ ನಡೆಸಿದರು. ಬಳಿಕ ಕಂಪನಿಗೆ ಮುತ್ತಿಗೆ ಹಾಕಲಾಯಿತು.
ಈ ವೇಳೆ ಸಮಜಾಯಿಷಿ ನೀಡಿದ ಕಂಪನಿಯ ಮ್ಯಾನೇಜರ್ , ಹಳೇ ಬೀಡಿ ಎಲೆ ಖಾಲಿ ಮಾಡಿದ್ದು ಈಗ ಹೊಸ ಎಲೆ ಪೂರೈಕೆಯಾಗಿದೆ. ಎರಡು ದಿನಗಳಲ್ಲಿ ಹೊಸ ಎಲೆಯನ್ನು ಕಾರ್ಮಿಕರಿಗೆ ವಿತರಿಸಲಾಗುವುದು ಎಂದು ಭರವಸೆ ನೀಡಿದರು. ನಂತರ ಸಂಘದ ಮುಖಂಡರು ಹಾಗೂ ಕಾರ್ಮಿಕರು ಎಲೆ ಸಂಸ್ಕರಿಸುವ ಗೋಡೌನ್ ಗೆ ಹೋಗಿ ಪರಿಶಿಲಿಸಿದರು.ಬಳಿಕ ಪ್ರತಿಭಟನೆಯನ್ನು ವಾಪಸು ಪಡೆಯಲಾಯಿತು.
ಪ್ರತಿಭಟನೆಯನ್ನುದ್ದೇಶಿಸಿ ಕಾರ್ಕಳ ತಾಲೂಕು ಬೀಡಿ ಕಾರ್ಮಿಕ ಸಂಘದ ಕಾರ್ಯದರ್ಶಿ ಕವಿರಾಜ್. ಎಸ್.ಕಾಂಚನ್, ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಉಪಾಧ್ಯಕ್ಷ ರಾದ ಬಲ್ಕೀಸ್,ಕಾರ್ಯದರ್ಶಿ ಉಮೇಶ್ ಕುಂದರ್ ಮಾತನಾಡಿದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…