ಹುಣಸೂರು: ರಾತ್ರಿ ಸಮಯದಲ್ಲಿ ಮೊಬೈಲ್ ಅಂಗಡಿ ಮತ್ತು ಬಾಳೆಮಂಡಿ ಅಂಗಡಿಯಲ್ಲಿ ಸರಣಿ ಕಳ್ಳತನ ನಡೆದಿರುವ ಘಟನೆ ಹನಗೋಡು ಹೋಬಳಿಯಲ್ಲಿ ನಡೆದಿದೆ. ಕಳ್ಳರು ಬೀಗ ಮುರಿದು ಮಾಲಿಕ ಮಹೇಶ್ ರವರ ಮೊಬೈಲ್ ಅಂಗಡಿಯಲ್ಲಿ ಸುಮಾರು 60000/- ನಗದು ಮತ್ತು ಪಕ್ಕದ ಬಾಳೆಮಂಡಿ ಅಂಗಡಿಲ್ಲಿ 4000/- ನಗದನ್ನು ದೋಚಿದ್ದಾರೆ ಎಂದು ಹೇಳಲಾಗಿದೆ. ಜೊತೆಗೆ ಮುರಿದ ಬೀಗವನ್ನು ಅನುಮಾನ ಬಾರದಿರಲ್ಲಿ ಎಂದು ತಮ್ಮೊಂದಿಗೆ ತೆಗೆದುಕೊಂಡು ಹೋಗಿದ್ದಾರೆ.
ಹನಗೋಡು ಹೋಬಳಿಯ ವೀರತಯ್ಯನಕೊಪ್ಪಲು ಗ್ರಾಮದ ನಿವಾಸಿ ಮಹೇಶ್ ರವರು ಹನಗೋಡು ಗ್ರಾಮದ ಶಂಕರಪ್ಪ ರವರ ಮಳಿಗೆಯಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿದ್ದರು. ಎಂದಿನಂತೆ ಸಾಯಿಂಕಾಲ ಸುಮಾರು 60000 ಹಣವನ್ನು ಕ್ಯಾಸ್ ಬಾಕ್ಸ್ ನಲ್ಲಿ ಇರಿಸಿ ಬೀಗ ಹಾಕಿ ಹೋಗಿದ್ದರಂತೆ. ಬೆಳಗ್ಗೆ ಬಂದು ನೋಡಿದಾಗ ಅಂಗಡಿಯ ಬೀಗ ತೆರೆದಿರುವುದು ಕಂಡು ಗಾಬರಿಗೊಂಡ ಮಾಲಿಕ ಮಹೇಶ್ ತಕ್ಷಣ ಒಳಗೆ ಹೋಗಿ ನೋಡಿದಾಗ ಹಣ ದೋಚಿರುವುದು ಖಚಿತವಾಗಿದೆ. ಪಕ್ಕದ ಬಾಳೆ ಮಂಡಿ ಮಾಲಿಕರಾದ ರಾಘುವೇಂದ್ರ ರವರು ತಮ್ಮ ಅಂಗಡಿಯಲ್ಲೂ ಇಟ್ಟಿದ್ದ 4000/- ನಗದನ್ನು ಕಳ್ಳರು ದೋಚಿದ್ದಾರೆ ಎಂಬುದಾಗಿ ಹೇಳಿದ್ದಾರೆ.
ಹನಗೋಡು ಹೋಬಳಿಯು ಸುಮಾರು ಗ್ರಾಮಗಳಿಂದ ಕೂಡಿದ್ದು ಹಲವಾರು ಜನ ವ್ಯಾಪಾರ, ವ್ಯವಹಾರ ಮಾಡುವುದರಿಂದ ಪೊಲೀಸ್ ವ್ಯವಸ್ತೆ ಸುವ್ಯವಸ್ಥಿತವಾಗಿರಬೇಕು ಹಾಗೂ ಈ ಹಿಂದೆ ಇದ್ದ ಹೆಡ್ ಕಾನ್ಸಟೇಬಲ್ ನಾಗರಾಜು ರವರ ಕಾಲಾವಧಿಯಲ್ಲಿ ಹನಗೋಡು ಹೋಬಳಿಯಲ್ಲಿ ಎಲ ರೀತಿಯಲ್ಲೂ ಸ್ವಲ್ಪ ಭದ್ರತೆಯಿಂದ ಇತ್ತು, ಈಗ ಪೊಲೀಸ್ ಚೌಕಿ ಇದ್ದರೂ ಅದರಲ್ಲಿ ಪೊಲೀಸ್ ಇರುತ್ತಿಲ್ಲ ಬೀಗ ಹಾಕಿ ಅವರ ಪಾಡಿಗೆ ಹೋಗುತ್ತಿರುತ್ತಾರೆ ಹಾಗಾಗಿ ಮುಂದಿನ ದಿನಗಳಲ್ಲಿ ರಾತ್ರಿ ವೇಳೆಯಲ್ಲಿ ಪೊಲೀಸ್ ಭದ್ರತೆ ಒದಗಿಸಬೇಕು ಎಂದು ಗ್ರಾಮಸ್ಥರು ಮತ್ತು ವ್ಯಾಪಾರಸ್ಥರು ಮನವಿ ಮಾಡಿದ್ದಾರೆ. ಈ ಸಂಬಂಧ ಹುಣಸೂರು ಗ್ರಾಮಾಂತ ಠಾಣೆಯಲ್ಲಿ ದೂರು ದಾಖಲಾಗಿದ್ದು , ಪೊಲೀಸ್ ಅಧಿಕಾರಿಗಳು ಸ್ಥಳ ಮಹಜರು ಮಾಡಿ ಕ್ರಮಕೈಗೊಳ್ಳುವುದಾಗಿ ಹೇಳಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…