ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಮೂರೂ ಕ್ಷೇತ್ರದ ವಿಜಯದಿಂದಾಗಿ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟಿರುವುದು ಸ್ಪಷ್ಟ ಆಗಿದೆ ಎಂದು ಕಾಂಗ್ರೆಸ್ ನಾಯಕ ಮುನಿಯಾಲು ಉದಯ ಶೆಟ್ಟಿ ತಿಳಿಸಿದ್ದಾರೆ.
ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಾಗೂ ಕಾಂಗ್ರೆಸ್ ಅಧ್ಯಕ್ಷರಾದ ಡಿ ಕೆ ಶಿವ ಕುಮಾರ್ ರವರ ಕಾರ್ಯ ವೈಖರಿಯನ್ನು ಜನತೆ ಒಪ್ಪಿ ಕೊಂಡಿದ್ದಾರೆ.
ಜನರ ಮನೆಗೆ ತಲುಪುವ ವಿವಿಧ ಭಾಗ್ಯಗಳ ಸೇವೆಯನ್ನು ಜನ ಒಪ್ಪಿ ಕೊಂಡಿರುವುದು ಈ ಚುನಾವಣೆಯಲ್ಲಿ ಸ್ಪಷ್ಟ ಆಗಿದೆ.
ಕಾಂಗ್ರೆಸ್ ಪಕ್ಷಕ್ಕೆ ಮೂರೂ ವಿಧಾನಸಭಾ ಕ್ಷೇತ್ರಗಳ ಗೆಲುವು ನೈತಿಕ ಸ್ಥೈರ್ಯವನ್ನು ಹೆಚ್ಚಿಸಿದಂತಾಗಿದೆ. ಕ್ಲೀನ್ ಇಮೇಜನ್ನು ಹೊಂದಿರುವ ಸಿದ್ದರಾಮಯ್ಯನವರು ಕಳಂಕರಹಿತ ಮುಖ್ಯಮಂತ್ರಿ ಹಾಗೂ ಡಿ ಕೆ ಶಿವ ಕುಮಾರ್ ರವರು ಉತ್ತಮ ಆಡಳಿತಗಾರ ಎಂಬುದನ್ನು ಮತದಾರ ಪ್ರಭುಗಳು ಮತ್ತೊಮ್ಮೆ ಸಾಭೀತು ಮಾಡಿದ್ದಾರೆ.
ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಿಂದಾಗಿ ಕಾಂಗ್ರೆಸ್ ಆಡಳಿತವು ರಾಜ್ಯದ ಜನತೆಯ ಮನಸ್ಸು ಗೆದ್ದಿದೆ ಎನ್ನುವುದಕ್ಕೆ ಇಂದಿನ ತೀರ್ಪು ಸಾಕ್ಷಿಯಾಗಿದೆ. ಕಾಂಗ್ರೆಸ್ ಆಡಳಿತವನ್ನು ಪೂರ್ಣ ಮನಸ್ಸಿನಿಂದ ಬೆಂಬಲಿಸಿದ ಮತದಾರ ಪ್ರಭುವಿಗೆ ಧನ್ಯವಾದಗಳು ಎಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲುರವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನಲ್ಲಿ ಸೋಮವಾರ ಸಂಜೆ, ಗುಡುಗು, ಸಿಡಿಲು ಸಹಿತ ಬಾರೀ ಮಳೆಯಾಗಿದ್ದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಉಜಿರೆಯ ಸಮೀಪ…
ಸಂಕೀರ್ಣ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ಹೊಸ ಜೀವನ ನೀಡಿದ ಫಾದರ್ ಮುಲ್ಲರ್ ವೈದ್ಯರ ತಂಡ ಮಂಗಳೂರಿನ ಫಾದರ್ ಮುಲ್ಲರ್…
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ ಪೆರುವಾಯಿ ನಿವಾಸಿ ಅಬ್ಬಾಸ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಎ.16ರಂದು ಅಬ್ಬಾಸ್…
ಖಾಸಗಿ ಎಕ್ಸ್ಪ್ರೆಸ್ ಬಸ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋರಿಕ್ಷಾ ಚಾಲಕ ಸೇರಿದಂತೆ ಮೂವರು ಗಾಯಗೊಂಡ…
ಹಣ ಮತ್ತು ಚಿನ್ನಾಭರಣಕ್ಕಾಗಿ ತನ್ನದೇ ಚಿಕ್ಕಮ್ಮನನ್ನು ಕೊಲೆ ಮಾಡಿ, ಶವ ಸುಟ್ಟು ಹಾಕಿದ್ದ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದ್ದು,…
ಸ್ನೇಹಿತರೊಂದಿಗೆ ಪಾರ್ಟಿಗೆ ತೆರಳಿದ್ದ ಯುವತಿಯೊಬ್ಬಳು ಮರುದಿನ ಲಾಡ್ಜ್ ವೊಂದರಲ್ಲಿ ಶ*ವವಾಗಿ ಪತ್ತೆಯಾಗಿರುವ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ…