ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಮೂರೂ ಕ್ಷೇತ್ರದ ವಿಜಯದಿಂದಾಗಿ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟಿರುವುದು ಸ್ಪಷ್ಟ ಆಗಿದೆ ಎಂದು ಕಾಂಗ್ರೆಸ್ ನಾಯಕ ಮುನಿಯಾಲು ಉದಯ ಶೆಟ್ಟಿ ತಿಳಿಸಿದ್ದಾರೆ.
ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಾಗೂ ಕಾಂಗ್ರೆಸ್ ಅಧ್ಯಕ್ಷರಾದ ಡಿ ಕೆ ಶಿವ ಕುಮಾರ್ ರವರ ಕಾರ್ಯ ವೈಖರಿಯನ್ನು ಜನತೆ ಒಪ್ಪಿ ಕೊಂಡಿದ್ದಾರೆ.
ಜನರ ಮನೆಗೆ ತಲುಪುವ ವಿವಿಧ ಭಾಗ್ಯಗಳ ಸೇವೆಯನ್ನು ಜನ ಒಪ್ಪಿ ಕೊಂಡಿರುವುದು ಈ ಚುನಾವಣೆಯಲ್ಲಿ ಸ್ಪಷ್ಟ ಆಗಿದೆ.
ಕಾಂಗ್ರೆಸ್ ಪಕ್ಷಕ್ಕೆ ಮೂರೂ ವಿಧಾನಸಭಾ ಕ್ಷೇತ್ರಗಳ ಗೆಲುವು ನೈತಿಕ ಸ್ಥೈರ್ಯವನ್ನು ಹೆಚ್ಚಿಸಿದಂತಾಗಿದೆ. ಕ್ಲೀನ್ ಇಮೇಜನ್ನು ಹೊಂದಿರುವ ಸಿದ್ದರಾಮಯ್ಯನವರು ಕಳಂಕರಹಿತ ಮುಖ್ಯಮಂತ್ರಿ ಹಾಗೂ ಡಿ ಕೆ ಶಿವ ಕುಮಾರ್ ರವರು ಉತ್ತಮ ಆಡಳಿತಗಾರ ಎಂಬುದನ್ನು ಮತದಾರ ಪ್ರಭುಗಳು ಮತ್ತೊಮ್ಮೆ ಸಾಭೀತು ಮಾಡಿದ್ದಾರೆ.
ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಿಂದಾಗಿ ಕಾಂಗ್ರೆಸ್ ಆಡಳಿತವು ರಾಜ್ಯದ ಜನತೆಯ ಮನಸ್ಸು ಗೆದ್ದಿದೆ ಎನ್ನುವುದಕ್ಕೆ ಇಂದಿನ ತೀರ್ಪು ಸಾಕ್ಷಿಯಾಗಿದೆ. ಕಾಂಗ್ರೆಸ್ ಆಡಳಿತವನ್ನು ಪೂರ್ಣ ಮನಸ್ಸಿನಿಂದ ಬೆಂಬಲಿಸಿದ ಮತದಾರ ಪ್ರಭುವಿಗೆ ಧನ್ಯವಾದಗಳು ಎಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲುರವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…