ಮಂಗಳೂರು : ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯವರು ಕಂಟೇನರ್ಗಳಲ್ಲಿ ಹಣ ತಂದಿದ್ದಾರೆ. ತೂಕದ ಮೂಲಕ ಖರ್ಚು ಮಾಡಲಾಗಿದೆ ಎಂದು ಎಂಎಲ್ಸಿ ಬಿ ಕೆ ಹರಿಪ್ರಸಾದ್ ಆರೋಪ ಮಾಡಿದ್ದಾರೆ. ನಗರದ ಕಾಂಗ್ರೆಸ್ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮಹಾ ವಿಕಾಸ ಅಘಾಡಿ ಸೋಲಾಗಿದೆ. ಬಿಜೆಪಿಯಿಂದ ಮಹಾರಾಷ್ಟ್ರಕ್ಕೆ ಕಂಟೈನರ್ನಲ್ಲಿ ಹಣ ಬಂದಿದೆ. ಹಣ ಎಣಿಸುವ ಮಷಿನ್ ಬಿಟ್ಟು ತೂಕದ ಲೆಕ್ಕದಲ್ಲಿ ಖರ್ಚು ಮಾಡಿದ್ದಾರೆ ಎಂದು ಕಾಂಗ್ರೆಸ್ ಎಂಎಲ್ಸಿ ಹರಿಪ್ರಸಾದ್ ಆರೋಪ ಮಾಡಿದ್ದಾರೆ. ಇಲ್ಲವಾದರೆ ಮಹಾರಾಷ್ಟ್ರದಲ್ಲಿ ಗೆಲ್ಲಲು ಸಾದ್ಯವೇ ಇಲ್ಲ ಎಂದರು. ಕರ್ನಾಟಕದಲ್ಲಿ ನೀವು ಹಣ ಖರ್ಚು ಮಾಡಿಲ್ಲವೆ ಎನ್ನುವ ಪತ್ರಕರ್ತೆಯ ಪ್ರಶ್ನೆಗೆ “ಇಲ್ಲಿ ಯಾರು ಸಾಚಾ ಅಲ್ಲ. ನಾವು ಸತ್ಯ ಹರಿಶ್ಚಂದ್ರರೂ ಎನ್ನುವುದಿಲ್ಲ. ನಾವು ಎಲ್ಲಾ ವಿಷಯದಲ್ಲಿಯೂ ಅವರ ಸರಿ ಸಮಾನ ಪೈಪೋಟಿ ಕೊಟ್ಟಿದ್ದೇವೆ” ಎನ್ನುವ ಮೂಲಕ ಕಾಂಗ್ರೆಸ್ಸಿನಿಂದಲೂ ಹಣದ ಹೊಳೆ ಹರಿದಿದೆ ಎನ್ನುವುದನ್ನು ಪರೋಕ್ಷವಾಗಿ ಒಪ್ಪಿಕೊಂಡರು.
ಕರ್ನಾಟಕದಲ್ಲಿ ಎಲ್ಲೂ ಸಹ ಕೋಮು ಸೌಹಾರ್ದ ಕದಡಲು ಅವಕಾಶ ನೀಡಿಲ್ಲ. ನಮ್ಮ ಕೆಲಸದ ಮೂಲಕ ಕೂಡ ಅನ್ನ ಕೊಟ್ಟಿದ್ದೇವೆ. ಬಿಜೆಪಿ ಚುನಾವಣೆಗೂ ಮೊದಲು ಸುಳ್ಳು ವದಂತಿ ಹಬ್ಬಿಸಿದ್ದರು. ಗ್ಯಾರಂಟಿ, ವಕ್ಸ್ ವಿಚಾರ ಪ್ರಸ್ತಾಪಿಸಿ ಅಪಪ್ರಚಾರ ಮಾಡಿದರು. ಆದರೆ ಅದು ಕೆಲಸ ಮಾಡಲಿಲ್ಲ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಕೆ ಹರೀಶ್ ಕುಮಾರ್, ಮಾಜಿ ಸಚಿವರು ಅಭಯಚಂದ್ರ ಜೈನ್, ಮಾಜಿ ಶಾಸಕರು ಜೆ ಆರ್ ಲೋಬೊ, ಕೆಪಿಸಿಸಿ ಪ್ರ. ಕಾರ್ಯದರ್ಶಿಗಳು ಮಿಥುನ್ ರೈ, ಪದ್ಮರಾಜ್ ಆರ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರು ಲುಕ್ಮನ್ ಬಂಟ್ವಾಳ್, ಮ ನ ಪಾ ಸದಸ್ಯರು ನವೀನ್ ಡಿ ಸೋಜಾ, ಜಿಲ್ಲಾ ಕಾಂಗ್ರೆಸ್ ಪ್ರ. ಕಾರ್ಯದರ್ಶಿಗಳು ವಿಕಾಸ್ ಶೆಟ್ಟಿ, ಟಿ ಕೆ ಸುದೀರ್, ಚಿತ್ತರಂಜನ್ ಶೆಟ್ಟಿ, ಜಿತೇಂದ್ರ ಸುವರ್ಣ, ನಿತ್ಯಾನಂದ ಶೆಟ್ಟಿ, ಪದ್ಮನಾಬ ಅಮೀನ್., ಸಾರಿಕಾ ಪೂಜಾರಿ, ಸರೀಫ್ ದೇರಳಕಟ್ಟೆ, ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…