ಉಡುಪಿ: ಕಾಂತಾರ ಸಿನೆಮಾ ಚಿತ್ರೀಕರಣ ಮುಗಿಸಿ ಕೊಲ್ಲೂರು ವಸತಿಗೃಹಕ್ಕೆ ವಾಪಾಸಾಗುತ್ತಿದ್ದ ವೇಳೆ ಬಸ್ ಪಲ್ಟಿಯಾಗಿ ಹಲವು ಕಲಾವಿದರು ಗಾಯಗೊಂಡಿರುವ ಘಟನೆ ಕೊಲ್ಲೂರು ಸಮೀಪದ ಆನೆಜರಿ ಎದುರು ಭಾನುವಾರ ರಾತ್ರಿ ಸಂಭವಿಸಿದೆ.
ಮುದೂರಿನಲ್ಲಿ ಕಾಂತಾರ ಸಿನೆಮಾ ನೃತ್ಯ ಚಿತ್ರೀಕರಣ ಮುಗಿಸಿ ಸುಮಾರು 20ಕ್ಕೂ ಮಿಕ್ಕಿ ಕಿರಿಯ ನೃತ್ಯ ಕಲಾವಿದರು ತಮ್ಮ ವಸತಿಗೃ
ಹಕ್ಕೆ 407 ಬಸ್ನಲ್ಲಿ ವಾಪಾಸಾಗಿತ್ತಿದ್ದ ವೇಳೆ ಚಾಲಕ ಎದುರಿಗೆ ಬಂದ ಬೈಕ್ ಅನ್ನು ತಪ್ಪಿಸುವ ಭರದಲ್ಲಿ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ. ಗಾಯಗೊಂಡ ಹಲವು ಕಲಾವಿದರಿಗೆ ಜಡ್ಕಲ್ ಮಹಾಲಕ್ಷ್ಮೀ ಕ್ಲಿನಿಕ್ ನಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಾಲಕನಿಗೆ ಥಳಿತ: ಆಕ್ರೋಶ
ಚಾಲಕ ಮೊಬೈಲ್ ಬಳಕೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಿ ಬಸ್ ಪಲ್ಟಿಯಾದ ಬಳಿಕ ಉಪ್ಪುಂದ ಮೂಲದ ಟೂರಿಸ್ಟ್ ಬಸ್ ಚಾಲಕನಿಗೆ ಕಲಾವಿದರು ಥಳಿಸಿದ್ದರು. ಸುದ್ದಿ ತಿಳಿಯುತ್ತಿದ್ದಂತೆಯೇ ಟೂರಿಸ್ಟ್ ಚಾಲಕ ಸಂಘದ ಸದಸ್ಯರು ಸ್ಥಳಕ್ಕೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದ್ದರಿಂದ ಕೆಲಹೊತ್ತು ಸ್ಥಳದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿತ್ತು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…