ಕರಾವಳಿ

ತುಳು ನಾಡಿನ ಸಾಂಪ್ರದಾಯಿಕ ಜನಪದ ಆಚರಣೆ ಕಂಬುಲದ ಕೋರಿ

ಬಂಟ್ವಾಳ : ೫೦೦ ವರ್ಷಗಳ ಇತಿಹಾಸ ಹೊಂದಿದ, ಕೃಷಿ ಪ್ರಧಾನ ತುಳು ನಾಡಿನಿಂದ ದೂರ ಸರಿಯುತ್ತಿರುವ ಸಾಂಪ್ರದಾಯಿಕ ಆಚರಣೆಯಾದ ಕಂಬಳ ಕೋರಿ ಎನ್ನುವ ಗದ್ದೆ ಪೂಜೆ ಬಂಟ್ವಾಳ ತಾಲೂಕಿನ ಕಾಡಬೆಟ್ಟು ಗುತ್ತಿನ ಮನೆಯಲ್ಲಿ ಸಂಪ್ರದಾಯ ಬದ್ಧವಾಗಿ ರವಿವಾರ ನಡೆಯಿತು.


ಕಂಬಳ ಕೋರಿ : ಕೃಷಿ ಸಂಸ್ಕೃತಿಯ ಪ್ರಕಾರ ದೈವಗಳ ಆರಾಧನೆಯೊಂದಿಗೆ ಭೂದೇವಿಯನ್ನು ಆರಾಧಿಸುವ ಕ್ರಮ ಕಂಬಳ ಕೋರಿ ಎನ್ನುವ ಗದ್ದೆ ಪೂಜೆ.
ಆಚರಣೆಯ ವಿಶೇಷತೆ: ಕಂಬಳ ಕೋರಿ ನಡೆಸಲು ಗುತ್ತಿನ ಮನೆಯ ಯಜಮಾನರು ದಿನ ನಿಗದಿಪಡಿಸಿದ ಬಳಿಕ ದೈವದ ಪಾತ್ರಿ ಮೂಲಕ ಗ್ರಾಮಸ್ಥರಿಗೆ ಆಮಂತ್ರಣವನ್ನು ನೀಡುತ್ತಾರೆ.
ಕಂಬಳ ಕೋರಿಯ ದಿನ ಕಂಬಳ ಗದ್ದೆಗೆ ಕೋಣಗಳನ್ನು ಇಳಿಸಿ ಗದ್ದೆ ಉಳುತ್ತಾರೆ. ಇತ್ತ ಗುತ್ತಿನ ಮನೆಯಲ್ಲಿ ಗ್ರಾಮ ದೈವಗಳಿಗೆ ಪರ್ವ(ವಿಽಪೂರ್ವಕ ಆಹಾರ) ಹಾಕಿಸಿ, ಪಂಜುರ್ಲಿ ದೈವದ ಹಗಲು ನೇಮೋತ್ಸವ ನಡೆಯುತ್ತದೆ. ದೈವ ಅಣಿಏರಿಸುವ ಮೊದಲು ದೈವದ ಮುಕ್ಕಾಲ್ದಿ(ಪಾತ್ರಿ), ನಾಗಬ್ರಹ್ಮ ದೈವ(ಪಾತ್ರಿ), ಗುತ್ತಿನ ಯಜಮಾನ, ತಂತ್ರಿ ಬಳಗ ಹಾಗೂ ಗ್ರಾಮಸ್ಥರೊಂದಿಗೆ ಕೊಂಬು ವಾಲಗದ ಹಿಮ್ಮೇಳದೊಂದಿಗೆ ಕಂಬಳ ಗದ್ದೆಗೆ ಬರುತ್ತಾರೆ.

 


ಪೂಕರೆ ಬಂಡಿ
ಅದಾಗಲೇ ಗದ್ದೆಯ ಬದಿಯಲ್ಲಿ ನಾಗಬ್ರಹ್ಮ ದೈವ ಅಣಿ ಏರಿಸಿ ಸಿದ್ಧಗೊಂಡಿರುತ್ತದೆ. ಅಲ್ಲಿ ಕಲ್ಲಿನ ಚಕ್ರವುಳ್ಳ ಸಾಗುವಾನಿ ಮರದ ಪಟ್ಟಿಗಳುಳ್ಳ ತೇರಿನಾಕಾರದ ಪೂಕರೆ ಬಂಡಿಯನ್ನು ಕೇಪುಳ ಹೂವುಗಳಿಂದ ಅಲಂಕರಿಸಿ ಸಿದ್ಧಗೊಳಿಸಲಾಗಿರುತ್ತದೆ. ಈ ಪೂಕರೆ ಬಂಡಿಯನ್ನು ಎಳೆಯಲು ಪಲ್ಲೆ ಎಂಬ ಬೀಳಲನ್ನೇ ಬಳಸಲಾಗುತ್ತದೆ. ಬಳಿಕ ಉಳುಮೆ ಮಾಡುತ್ತಿದ್ದ ಕೋಣಗಳನ್ನು ಮೇಲೆ ಬರುವಂತೆ ಹಾಗೂ ಪೂಕರೆ ಬಂಡಿಯನ್ನು ಎಳೆಯುವಂತೆ ನಾಗಬ್ರಹ್ಮ ದೈವ ಪಾತ್ರಿ ಅಪ್ಪಣೆ ನೀಡುತ್ತಾರೆ. ಗ್ರಾಮಸ್ಥರೆಲ್ಲ ಸೇರಿ ಸಂಭ್ರಮದಿಂದ ಪೂಕರೆ ಬಂಡಿಯನ್ನು ಎಳೆದುಕೊಂಡು ಗದ್ದೆಯ ಮಧ್ಯ ಭಾಗಕ್ಕೆ ತಂದು ನಿಲ್ಲಿಸುತ್ತಾರೆ. ವಿಶಾಲ ಗದ್ದೆಗೆ ನಾಗಬ್ರಹ್ಮ ದೈವ ಪಾತ್ರಿ ಎಲ್ಲರ ಜೊತೆ ಸುತ್ತು ಬಂದು ಉತ್ತಮ ಫಸಲು ಬರುವಂತೆ ಹರಸುತ್ತಾರೆ. ದೈವದ ಜೊತೆ ಓರ್ವ ವೇಷಧಾರಿ ಇದ್ದು ಎಲ್ಲಾ ಕಾರ್ಯಕ್ರಮಗಳನ್ನು ನಡೆಸಲು ಸೂಚನೆ ನೀಡುತ್ತದೆ. ಫಸಲಿಗೆ ಕೀಟ ಬಾಧೆ ಬಾರದಂತೆ ತಡೆಯಲು ಉರವೆ ಎಂಬ ತೆಂಗಿನ ಗರಿಯಿಂದ ತಯಾರಿಸಿದ ಹಾವಿನಾಕೃತಿಯ ರಕ್ಷಾದಾರವನ್ನು ಗದ್ದೆ ಬದಿಯ ತೆಂಗಿನ ಮರಕ್ಕೆ ಕಟ್ಟಲಾಗುತ್ತದೆ. ನಾಗಬ್ರಹ್ಮ ದೈವದ ವಾಹನವಾಗಿ ಕುದುರೆಯನ್ನು ತೆಂಗಿನ ಹಸಿ ಸೋಗೆಯಿಂದ ಸಾಂಕೇತಿಕವಾಗಿ ನಿರ್ಮಿಸುತ್ತಾರೆ. ಅದನ್ನು ನಾಗಬನಕ್ಕೆ ಕೊಂಡೊಯ್ಯಲಾಗುತ್ತದೆ. ಅಲ್ಲಿಂದ ಗುತ್ತಿನ ಮನೆಗೆ ಹಿಂದಿರುಗಿ ನಾಗಬ್ರಹ್ಮ ದೈವಕ್ಕೆ ನೇಮ ನಡೆಯುತ್ತದೆ. ಜತೆಗೆ ಪಂಜುರ್ಲಿ ದೈವದ ನೇಮ ಮುಂದುವರಿದು ದೈವ ನುಡಿ ಕೊಡುವುದರೊಂದಿಗೆ ಮುಕ್ತಾವಾಗುತ್ತದೆ.
ಈ ಕಾರ್ಯಕ್ರಮದಲ್ಲಿ ದೈವ ಪಾತ್ರಿಗಳು, ಬ್ಯಾಂಡ್, ವಾಲಗದವರ ಸಹಿತ ಎಲ್ಲ ಕಾರ್ಯಗಳನ್ನು ಕಾಡಬೆಟ್ಟು ಗ್ರಾಮದವರೇ ನಿರ್ವಹಿಸುವುದು ವಿಶೇಷ. ದೈವಾರಾಧನೆ ಮೂಲಕ ಈ ಕಾರ್ಯದಲ್ಲಿ ಗ್ರಾಮಸ್ಥರೆಲ್ಲರೂ ಒಂದಾಗಿ ಭಾಗವಹಿಸುತ್ತಾರೆ. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ, ತಂತ್ರಿಗಳಾದ ನಾರಾಯಣ ಶಿಬರಾಯ, ಜಿ.ಪಂ.ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಬಿ.ಪದ್ಮಶೇಖರ ಜೈನ್, ಅನುವಂಶೀಯ ಆಡಳಿತದಾರ ಮಹಾವೀರ ಅಜ್ರಿ ಕಾಡಬೆಟ್ಟುಗುತ್ತು, ಕಾವಳಪಡೂರು ಗ್ರಾ.ಪಂ.ಅಧ್ಯಕ್ಷ ಲಕ್ಷ್ಮೀ ನಾರಾಯಣ ಶರ್ಮ, ಪ್ರಮುಖರಾದ ಪಿ.ಜಿನರಾಜ ಆರಿಗ, ಸತೀಶ್ ಕುಮಾರ್ ಜೈನ್ ಪಿಲಿಂಗಾಲು,ಭರತ್ ಕುಮಾರ್ ಜೈನ್ ಬಲ್ಲೋಡಿಗುತ್ತು, ಬಾಳಕೃಷ್ಣ ಅಂಚನ್, ಹಂಸರಾಜ ಜೈನ್ ಪುರಿಯ, ಸುರೇಂದ್ರ ಕುಮಾರ್ ಜೈನ್,ಶ್ರೇಯಂಸ ಜೈನ್, ರಂಜಿತ್ ಜೈನ್, ಅಮಿತ್ ಕುಮಾರ್, ರಾಜ್ ಪ್ರಸಾದ್ ಆರಿಗ ಮತ್ತಿತರರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…

6 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…

7 hours ago

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…

11 hours ago

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…

1 day ago

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…

4 days ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…

5 days ago