ಜನ ಮನದ ನಾಡಿ ಮಿಡಿತ

Advertisement

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ತಂದೆ ಸಾವು ಮಗಳಿಗೆ ಗಂಭೀರ ಗಾಯ…!

ಬೇಲೂರು :ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಸ್ಥಳದಲ್ಲೇ ತಂದೆ ಮೃತಪಟ್ಟು, ಮಗಳು ಗಂಭೀರವಾಗಿ ಗಾಯಗೊಂಡ ಘಟನೆ ಬೇಲೂರು ತಾಲ್ಲೂಕಿನ, ಕೊರಟಿಗೆರೆ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಚಿಕ್ಕಮಗಳೂರು ಮೂಲದ, ಬೇಲೂರಿನಲ್ಲಿ ಬಟ್ಟೆ ಅಂಗಡಿ ಹೊಂದಿದ್ದ ದಯಾನಂದ (46) ಮೃತ ವ್ಯಕ್ತಿ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ, ಮಗಳು ನಿಶ್ಮಿತಾ (16) ಗಂಭೀರವಾಗಿ ಗಾಯಗೊಂಡಿದ್ದು ಬೇಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾನುವಾರ ಚಿಕ್ಕಮಗಳೂರಿಗೆ ತೆರಳಿದ್ದ ದಯಾನಂದ ಅವರು ಇಂದು ಬೆಳಗ್ಗೆ ಮಗಳನ್ನು ಶಾಲೆಗೆ ಬಿಡಲೆಂದು ಚಿಕ್ಕಮಗಳೂರಿನಿಂದ ಬೇಲೂರಿಗೆ ಕಾರಿನಲ್ಲಿ ಬರುತ್ತಿದ್ದರು.

ಕೊರಟಿಗೆರೆಯಲ್ಲಿ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಅಡಿಕೆ ತೋಟಕ್ಕೆ ಉರುಳಿ ತಲೆಕೆಳಗಾಗಿ ಬಿದ್ದಿದ್ದು ದಯಾನಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಬೇಲೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!