ಬಂಟ್ವಾಳ: ಬಂಟ್ವಾಳ ಪುರಸಭೆಯ 2 ನೇ ವಾರ್ಡ್ ನ ಒಂದು ಸದಸ್ಯ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುರುಷೋ ತ್ತಮ ಪೂಜಾರಿ ಅವರು ಗೆಲುವು ಸಾಧಿಸಿದ್ದಾರೆ.
ಅ ಮೂಲಕ ಕಾಂಗ್ರೆಸ್ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ.
ಬಿಜೆಪಿಯ ಅಭ್ಯರ್ಥಿ ಇಂದ್ರೇಶ್ ಪೂಜಾರಿ ಅವರಿಗೆ ಸೋಲಾಗಿದೆ.ಇಬ್ಬರು ರಾಜಕೀಯವಾಗಿ ಹೊಸಮುಖಗಳಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಅವರು ವಿಜಯಿಯಾಗಿದ್ದಾರೆ.ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಂಗಾಧರ ಪೂಜಾರಿ ಅವರು ಪಕ್ಷತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.ಇವರ ತೆರವಾದ ಸ್ಥಾನಕ್ಕೆ ನ.23 ರಂದು ಶನಿವಾರ ಉಪಚುನಾವಣೆ ನಡೆದಿತ್ತು.
ಬಿಜೆಪಿ ಲೆಕ್ಕಾಚಾರ ಉಲ್ಟಾಪಲ್ಟ
ಬಂಟ್ವಾಳ ಪುರಸಭೆಯಲ್ಲಿ ಅಧಿಕಾರವನ್ನು ಪಡೆಯಲು ಕೆಲವು ವಾರ್ಡ್ ಗಳನ್ನು ತನ್ನ ಹಿಡಿತಕ್ಕೆ ತರಲು ತಂತ್ರಗಾರಿಕೆಯನ್ನು ಮಾಡಿದ ಬಿಜೆಪಿಯ ಲೆಕ್ಕಾಚಾರ ಉಲ್ಟಾಪಲ್ಟವಾಗಿದೆ.
ಪುರಸಭೆಯ 2 ನೇ ವಾರ್ಡ್ ನಲ್ಲಿ ನಿರಂತರವಾಗಿ ಗೆಲುವು ಸಾಧಿಸುತ್ತಿದ್ದ ಗಂಗಾಧರ ಪೂಜಾರಿ ಅವರನ್ನು ಬಿಜೆಪಿಗೆ ಎಳೆದುಕೊಂಡು ತಂದಿದ್ದ ಬಿಜೆಪಿಗೆ ಕಾಂಗ್ರೆಸ್ ನ ಕೋಟೆಯನ್ನು ಬೇಧಿಸಲು ಸಾಧ್ಯವಾಗಿಲ್ಲ. ಅಮೂಲಕ ಬಿಜೆಪಿಗೆ ಮುಖಭಂಗವಾಗಿದೆ.ಕಾಂಗ್ರೆಸ್ ತನ್ನ ಚಾಕಚಕ್ಯತೆಯಿಂದ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಸಫಲತೆಯನ್ನು ಕಂಡಿದೆ. ಮತ್ತು ಸಂಘಟನಾತ್ಮಕ ರೀತಿಯಲ್ಲಿ ಪಕ್ಷ ಉತ್ತಮ ಹೆಜ್ಜೆಯನ್ನು ಇಡುತ್ತಿರುವುದು ಉಪಚುನಾವಣೆ ಗೆಲುವು ಸಾಕ್ಷಿಯಾಗಿದೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…