ಬಂಟ್ವಾಳ: ಬಂಟ್ವಾಳ ಪುರಸಭೆಯ 2 ನೇ ವಾರ್ಡ್ ನ ಒಂದು ಸದಸ್ಯ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುರುಷೋ ತ್ತಮ ಪೂಜಾರಿ ಅವರು ಗೆಲುವು ಸಾಧಿಸಿದ್ದಾರೆ.
ಅ ಮೂಲಕ ಕಾಂಗ್ರೆಸ್ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ.
ಬಿಜೆಪಿಯ ಅಭ್ಯರ್ಥಿ ಇಂದ್ರೇಶ್ ಪೂಜಾರಿ ಅವರಿಗೆ ಸೋಲಾಗಿದೆ.ಇಬ್ಬರು ರಾಜಕೀಯವಾಗಿ ಹೊಸಮುಖಗಳಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಅವರು ವಿಜಯಿಯಾಗಿದ್ದಾರೆ.ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಂಗಾಧರ ಪೂಜಾರಿ ಅವರು ಪಕ್ಷತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.ಇವರ ತೆರವಾದ ಸ್ಥಾನಕ್ಕೆ ನ.23 ರಂದು ಶನಿವಾರ ಉಪಚುನಾವಣೆ ನಡೆದಿತ್ತು.
ಬಿಜೆಪಿ ಲೆಕ್ಕಾಚಾರ ಉಲ್ಟಾಪಲ್ಟ
ಬಂಟ್ವಾಳ ಪುರಸಭೆಯಲ್ಲಿ ಅಧಿಕಾರವನ್ನು ಪಡೆಯಲು ಕೆಲವು ವಾರ್ಡ್ ಗಳನ್ನು ತನ್ನ ಹಿಡಿತಕ್ಕೆ ತರಲು ತಂತ್ರಗಾರಿಕೆಯನ್ನು ಮಾಡಿದ ಬಿಜೆಪಿಯ ಲೆಕ್ಕಾಚಾರ ಉಲ್ಟಾಪಲ್ಟವಾಗಿದೆ.
ಪುರಸಭೆಯ 2 ನೇ ವಾರ್ಡ್ ನಲ್ಲಿ ನಿರಂತರವಾಗಿ ಗೆಲುವು ಸಾಧಿಸುತ್ತಿದ್ದ ಗಂಗಾಧರ ಪೂಜಾರಿ ಅವರನ್ನು ಬಿಜೆಪಿಗೆ ಎಳೆದುಕೊಂಡು ತಂದಿದ್ದ ಬಿಜೆಪಿಗೆ ಕಾಂಗ್ರೆಸ್ ನ ಕೋಟೆಯನ್ನು ಬೇಧಿಸಲು ಸಾಧ್ಯವಾಗಿಲ್ಲ. ಅಮೂಲಕ ಬಿಜೆಪಿಗೆ ಮುಖಭಂಗವಾಗಿದೆ.ಕಾಂಗ್ರೆಸ್ ತನ್ನ ಚಾಕಚಕ್ಯತೆಯಿಂದ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಸಫಲತೆಯನ್ನು ಕಂಡಿದೆ. ಮತ್ತು ಸಂಘಟನಾತ್ಮಕ ರೀತಿಯಲ್ಲಿ ಪಕ್ಷ ಉತ್ತಮ ಹೆಜ್ಜೆಯನ್ನು ಇಡುತ್ತಿರುವುದು ಉಪಚುನಾವಣೆ ಗೆಲುವು ಸಾಕ್ಷಿಯಾಗಿದೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…