ಬಂಟ್ವಾಳ: ಬಂಟ್ವಾಳ ಪುರಸಭೆಯ 2 ನೇ ವಾರ್ಡ್ ನ ಒಂದು ಸದಸ್ಯ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುರುಷೋ ತ್ತಮ ಪೂಜಾರಿ ಅವರು ಗೆಲುವು ಸಾಧಿಸಿದ್ದಾರೆ.
ಅ ಮೂಲಕ ಕಾಂಗ್ರೆಸ್ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ.
ಬಿಜೆಪಿಯ ಅಭ್ಯರ್ಥಿ ಇಂದ್ರೇಶ್ ಪೂಜಾರಿ ಅವರಿಗೆ ಸೋಲಾಗಿದೆ.ಇಬ್ಬರು ರಾಜಕೀಯವಾಗಿ ಹೊಸಮುಖಗಳಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಅವರು ವಿಜಯಿಯಾಗಿದ್ದಾರೆ.ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಂಗಾಧರ ಪೂಜಾರಿ ಅವರು ಪಕ್ಷತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.ಇವರ ತೆರವಾದ ಸ್ಥಾನಕ್ಕೆ ನ.23 ರಂದು ಶನಿವಾರ ಉಪಚುನಾವಣೆ ನಡೆದಿತ್ತು.
ಬಿಜೆಪಿ ಲೆಕ್ಕಾಚಾರ ಉಲ್ಟಾಪಲ್ಟ
ಬಂಟ್ವಾಳ ಪುರಸಭೆಯಲ್ಲಿ ಅಧಿಕಾರವನ್ನು ಪಡೆಯಲು ಕೆಲವು ವಾರ್ಡ್ ಗಳನ್ನು ತನ್ನ ಹಿಡಿತಕ್ಕೆ ತರಲು ತಂತ್ರಗಾರಿಕೆಯನ್ನು ಮಾಡಿದ ಬಿಜೆಪಿಯ ಲೆಕ್ಕಾಚಾರ ಉಲ್ಟಾಪಲ್ಟವಾಗಿದೆ.
ಪುರಸಭೆಯ 2 ನೇ ವಾರ್ಡ್ ನಲ್ಲಿ ನಿರಂತರವಾಗಿ ಗೆಲುವು ಸಾಧಿಸುತ್ತಿದ್ದ ಗಂಗಾಧರ ಪೂಜಾರಿ ಅವರನ್ನು ಬಿಜೆಪಿಗೆ ಎಳೆದುಕೊಂಡು ತಂದಿದ್ದ ಬಿಜೆಪಿಗೆ ಕಾಂಗ್ರೆಸ್ ನ ಕೋಟೆಯನ್ನು ಬೇಧಿಸಲು ಸಾಧ್ಯವಾಗಿಲ್ಲ. ಅಮೂಲಕ ಬಿಜೆಪಿಗೆ ಮುಖಭಂಗವಾಗಿದೆ.ಕಾಂಗ್ರೆಸ್ ತನ್ನ ಚಾಕಚಕ್ಯತೆಯಿಂದ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಸಫಲತೆಯನ್ನು ಕಂಡಿದೆ. ಮತ್ತು ಸಂಘಟನಾತ್ಮಕ ರೀತಿಯಲ್ಲಿ ಪಕ್ಷ ಉತ್ತಮ ಹೆಜ್ಜೆಯನ್ನು ಇಡುತ್ತಿರುವುದು ಉಪಚುನಾವಣೆ ಗೆಲುವು ಸಾಕ್ಷಿಯಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…