ಬಂಟ್ವಾಳ: ಬಂಟ್ವಾಳ ಪುರಸಭೆಯ 2 ನೇ ವಾರ್ಡ್ ನ ಒಂದು ಸದಸ್ಯ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುರುಷೋ ತ್ತಮ ಪೂಜಾರಿ ಅವರು ಗೆಲುವು ಸಾಧಿಸಿದ್ದಾರೆ.
ಅ ಮೂಲಕ ಕಾಂಗ್ರೆಸ್ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ.
ಬಿಜೆಪಿಯ ಅಭ್ಯರ್ಥಿ ಇಂದ್ರೇಶ್ ಪೂಜಾರಿ ಅವರಿಗೆ ಸೋಲಾಗಿದೆ.ಇಬ್ಬರು ರಾಜಕೀಯವಾಗಿ ಹೊಸಮುಖಗಳಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಅವರು ವಿಜಯಿಯಾಗಿದ್ದಾರೆ.ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಂಗಾಧರ ಪೂಜಾರಿ ಅವರು ಪಕ್ಷತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.ಇವರ ತೆರವಾದ ಸ್ಥಾನಕ್ಕೆ ನ.23 ರಂದು ಶನಿವಾರ ಉಪಚುನಾವಣೆ ನಡೆದಿತ್ತು.
ಬಿಜೆಪಿ ಲೆಕ್ಕಾಚಾರ ಉಲ್ಟಾಪಲ್ಟ
ಬಂಟ್ವಾಳ ಪುರಸಭೆಯಲ್ಲಿ ಅಧಿಕಾರವನ್ನು ಪಡೆಯಲು ಕೆಲವು ವಾರ್ಡ್ ಗಳನ್ನು ತನ್ನ ಹಿಡಿತಕ್ಕೆ ತರಲು ತಂತ್ರಗಾರಿಕೆಯನ್ನು ಮಾಡಿದ ಬಿಜೆಪಿಯ ಲೆಕ್ಕಾಚಾರ ಉಲ್ಟಾಪಲ್ಟವಾಗಿದೆ.
ಪುರಸಭೆಯ 2 ನೇ ವಾರ್ಡ್ ನಲ್ಲಿ ನಿರಂತರವಾಗಿ ಗೆಲುವು ಸಾಧಿಸುತ್ತಿದ್ದ ಗಂಗಾಧರ ಪೂಜಾರಿ ಅವರನ್ನು ಬಿಜೆಪಿಗೆ ಎಳೆದುಕೊಂಡು ತಂದಿದ್ದ ಬಿಜೆಪಿಗೆ ಕಾಂಗ್ರೆಸ್ ನ ಕೋಟೆಯನ್ನು ಬೇಧಿಸಲು ಸಾಧ್ಯವಾಗಿಲ್ಲ. ಅಮೂಲಕ ಬಿಜೆಪಿಗೆ ಮುಖಭಂಗವಾಗಿದೆ.ಕಾಂಗ್ರೆಸ್ ತನ್ನ ಚಾಕಚಕ್ಯತೆಯಿಂದ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಸಫಲತೆಯನ್ನು ಕಂಡಿದೆ. ಮತ್ತು ಸಂಘಟನಾತ್ಮಕ ರೀತಿಯಲ್ಲಿ ಪಕ್ಷ ಉತ್ತಮ ಹೆಜ್ಜೆಯನ್ನು ಇಡುತ್ತಿರುವುದು ಉಪಚುನಾವಣೆ ಗೆಲುವು ಸಾಕ್ಷಿಯಾಗಿದೆ.
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…