ಜನ ಮನದ ನಾಡಿ ಮಿಡಿತ

Advertisement

ಶಿರಾಡಿ: ಕೆ ಎಸ್ ಆರ್ ಟಿಸಿ ಬಸ್ ಪಾದಚಾರಿ ಡಿಕ್ಕಿ; ವ್ಯಕ್ತಿ ಆಸ್ಪತ್ರೆಯಲ್ಲಿ ನಿಧನ

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಎಂಬಲ್ಲಿ ನ.25 ರಂದು ಬೆಳಗ್ಗೆ ಕೆ ಎಸ್ ಆರ್ ಟಿಸಿ ಬಸ್ ಪಾದಚಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಸಂಜೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ ಘಟನೆ ನಡೆದಿದೆ.


ಗಾಯಗೊಂಡವರನ್ನು ಶಿರಾಡಿ ಗ್ರಾಮದ ಪದಂಬಳ ನಿವಾಸಿ ಮಥಾಯಿ(ಮತ್ತಚ್ಚನ್)(70) ಎಂದು ಗುರುತಿಸಲಾಗಿದೆ.
ಗಾಯಗೊಂಡಿದ್ದ ವ್ಯಕ್ತಿಯನ್ನು 108 ಆಂಬುಲೆನ್ಸ್ ನಲ್ಲಿ ಪುತ್ತೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿತ್ತು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಂಜೆ ನಿಧನರಾದರು. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರಿಗೆ ಪತ್ನಿ,ಇಬ್ಬರು ಪುತ್ರರು ಇದ್ದಾರೆ.

ಶಿರಾಡಿ ಈ ಪ್ರದೇಶದಲ್ಲಿ ಸ್ಥಳೀಯರಿಗೆ ಓಡಾಡಲು ಸರ್ವಿಸ್ ರಸ್ತೆಯನ್ನು ನಿರ್ಮಿಸಲಿಲ್ಲ ಹಾಗೂ ರಸ್ತೆ ಕ್ರಾಸಿಂಗ್ ಪೇಟೆಯ ಮಧ್ಯದಲ್ಲಿ ಇಲ್ಲದಿರುವುದರಿಂದ ಈ ಪ್ರದೇಶದಲ್ಲಿ ಅತಿ ಹೆಚ್ಚು ಅಪಘಾತಗಳು ನಡೆಯುತ್ತಲೇ ಇದೆ. ಸರ್ವಿಸ್ ರಸ್ತೆಗಾಗಿ ಹಲವು ಬಾರಿ ಸಾರ್ವಜನಿಕರು ಮನವಿ ನೀಡಿದರು ಯಾವುದೇ ಪ್ರಯೋಜನವಾಗಲಿಲ್ಲ ಎಂದು ಸ್ಥಳೀಯರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕೆಂಬುದು ಊರವರ ಅಭಿಲಾಷೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!