ಜನ ಮನದ ನಾಡಿ ಮಿಡಿತ

Advertisement

ಶಿರಾಡಿ: ಕೆ ಎಸ್ ಆರ್ ಟಿಸಿ ಬಸ್ ಪಾದಚಾರಿ ಡಿಕ್ಕಿ; ವ್ಯಕ್ತಿ ಆಸ್ಪತ್ರೆಯಲ್ಲಿ ನಿಧನ

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಎಂಬಲ್ಲಿ ನ.25 ರಂದು ಬೆಳಗ್ಗೆ ಕೆ ಎಸ್ ಆರ್ ಟಿಸಿ ಬಸ್ ಪಾದಚಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಸಂಜೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ ಘಟನೆ ನಡೆದಿದೆ.


ಗಾಯಗೊಂಡವರನ್ನು ಶಿರಾಡಿ ಗ್ರಾಮದ ಪದಂಬಳ ನಿವಾಸಿ ಮಥಾಯಿ(ಮತ್ತಚ್ಚನ್)(70) ಎಂದು ಗುರುತಿಸಲಾಗಿದೆ.
ಗಾಯಗೊಂಡಿದ್ದ ವ್ಯಕ್ತಿಯನ್ನು 108 ಆಂಬುಲೆನ್ಸ್ ನಲ್ಲಿ ಪುತ್ತೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿತ್ತು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಂಜೆ ನಿಧನರಾದರು. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರಿಗೆ ಪತ್ನಿ,ಇಬ್ಬರು ಪುತ್ರರು ಇದ್ದಾರೆ.

ಶಿರಾಡಿ ಈ ಪ್ರದೇಶದಲ್ಲಿ ಸ್ಥಳೀಯರಿಗೆ ಓಡಾಡಲು ಸರ್ವಿಸ್ ರಸ್ತೆಯನ್ನು ನಿರ್ಮಿಸಲಿಲ್ಲ ಹಾಗೂ ರಸ್ತೆ ಕ್ರಾಸಿಂಗ್ ಪೇಟೆಯ ಮಧ್ಯದಲ್ಲಿ ಇಲ್ಲದಿರುವುದರಿಂದ ಈ ಪ್ರದೇಶದಲ್ಲಿ ಅತಿ ಹೆಚ್ಚು ಅಪಘಾತಗಳು ನಡೆಯುತ್ತಲೇ ಇದೆ. ಸರ್ವಿಸ್ ರಸ್ತೆಗಾಗಿ ಹಲವು ಬಾರಿ ಸಾರ್ವಜನಿಕರು ಮನವಿ ನೀಡಿದರು ಯಾವುದೇ ಪ್ರಯೋಜನವಾಗಲಿಲ್ಲ ಎಂದು ಸ್ಥಳೀಯರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕೆಂಬುದು ಊರವರ ಅಭಿಲಾಷೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!