ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಎಂಬಲ್ಲಿ ನ.25 ರಂದು ಬೆಳಗ್ಗೆ ಕೆ ಎಸ್ ಆರ್ ಟಿಸಿ ಬಸ್ ಪಾದಚಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಸಂಜೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ ಘಟನೆ ನಡೆದಿದೆ.
ಗಾಯಗೊಂಡವರನ್ನು ಶಿರಾಡಿ ಗ್ರಾಮದ ಪದಂಬಳ ನಿವಾಸಿ ಮಥಾಯಿ(ಮತ್ತಚ್ಚನ್)(70) ಎಂದು ಗುರುತಿಸಲಾಗಿದೆ.
ಗಾಯಗೊಂಡಿದ್ದ ವ್ಯಕ್ತಿಯನ್ನು 108 ಆಂಬುಲೆನ್ಸ್ ನಲ್ಲಿ ಪುತ್ತೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿತ್ತು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಂಜೆ ನಿಧನರಾದರು. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರಿಗೆ ಪತ್ನಿ,ಇಬ್ಬರು ಪುತ್ರರು ಇದ್ದಾರೆ.
ಶಿರಾಡಿ ಈ ಪ್ರದೇಶದಲ್ಲಿ ಸ್ಥಳೀಯರಿಗೆ ಓಡಾಡಲು ಸರ್ವಿಸ್ ರಸ್ತೆಯನ್ನು ನಿರ್ಮಿಸಲಿಲ್ಲ ಹಾಗೂ ರಸ್ತೆ ಕ್ರಾಸಿಂಗ್ ಪೇಟೆಯ ಮಧ್ಯದಲ್ಲಿ ಇಲ್ಲದಿರುವುದರಿಂದ ಈ ಪ್ರದೇಶದಲ್ಲಿ ಅತಿ ಹೆಚ್ಚು ಅಪಘಾತಗಳು ನಡೆಯುತ್ತಲೇ ಇದೆ. ಸರ್ವಿಸ್ ರಸ್ತೆಗಾಗಿ ಹಲವು ಬಾರಿ ಸಾರ್ವಜನಿಕರು ಮನವಿ ನೀಡಿದರು ಯಾವುದೇ ಪ್ರಯೋಜನವಾಗಲಿಲ್ಲ ಎಂದು ಸ್ಥಳೀಯರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕೆಂಬುದು ಊರವರ ಅಭಿಲಾಷೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…