ತೀರ್ಥಹಳ್ಳಿ: ತುಂಗಾ ಕಮಾನು ಸೇತುವೆಯ ಕೆಳ ಭಾಗದಲ್ಲಿ ಕಮಾನಿಗೆ ಅಳವಡಿಸಲಾಗಿರುವ ಕಂಬದ ಕೆಳಗೆ ನ.26ರ ಮಂಗಳವಾರ ಬೆಳಗ್ಗೆ ಅಸ್ತಿ ಪಂಜರವೊಂದು ಪತ್ತೆಯಾಗಿತ್ತು.
ಸ್ಥಳೀಯ ಮೀನುಗಾರರು ಮೀನು ಹಿಡಿಯುವಾಗ ಇದನ್ನು ಗಮನಿಸಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅಸ್ತಿ ಪಂಜರವನ್ನು ಆಸ್ಪತ್ರೆಗೆ ರವಾನಿಸಿ ಪರೀಕ್ಷೆ ನಡೆಸಿದಾಗ ತಲೆ ಬುರುಡೆ, ಕೈ, ಕಾಲು ಎಲ್ಲವೂ ಬೇರೆ ಬೇರೆ ವ್ಯಕ್ತಿಯದ್ದು ಎಂದು ತಿಳಿದು ಬಂದಿದೆ.
ಮೆಡಿಕಲ್ ವಿದ್ಯಾರ್ಥಿ ಮೆಡಿಕಲ್ ಟೆಸ್ಟ್ ಮಾಡಿ ನಂತರ ಇಲ್ಲಿ ತಂದು ಬಿಸಾಕಿರುವ ಸಾಧ್ಯತೆ ಇರಬಹುದು ಎಂದು ಹೇಳಲಾಗುತ್ತಿದೆ. ಅಸ್ತಿ ಪಂಜರದ ಎಲ್ಲಾ ಭಾಗಗಳು ಬೇರೆ ಬೇರೆಯಾಗಿರುವ ಕಾರಣ ತೇಲಿ ಬಂದಿದ್ದು ಅಥವಾ ಕಾಣೆಯಾದ ವ್ಯಕ್ತಿಯದ್ದಲ್ಲ, ಇದು ಮೆಡಿಕಲ್ ಪರೀಕ್ಷೆಗೆ ಒಳಪಟ್ಟ ಅಸ್ತಿ ಪಂಜರವಿರಬಹುದು ಎಂದು ತೀರ್ಥಹಳ್ಳಿ ಪೊಲೀಸ್ ಮೂಲಗಳಿಂದ ಹೇಳಲಾಗಿದೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…