ಜನ ಮನದ ನಾಡಿ ಮಿಡಿತ

Advertisement

ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಕಲ್ಲಡ್ಕ ವಲಯದ ನೂತನ ಕಛೇರಿಯ ಉದ್ಘಾಟನೆ

ಬಂಟ್ವಾಳ : ಗ್ರಾಮೀಣ ಭಾಗದ ಜನರ ಅಭಿವೃದ್ಧಿಯ ದೃಷ್ಟಿಯಲ್ಲಿ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯು ಸಹಕಾರಿಯಾಗಿದೆ ಎಂದು ವಿಟ್ಲ ಕ್ಷೇತ್ರದ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಹೇಳಿದರು.

ಅವರು ಸೋಮವಾರ ಕಲ್ಲಡ್ಕ ಕೆಳಗಿನ ಪೇಟೆ ಲಲಿತಾ ಎಸ್ ರಾವ್ ರವರ ವಾಣಿಜ್ಯ ಸಂಕೀರ್ಣದಲ್ಲಿ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಕಲ್ಲಡ್ಕ ವಲಯದ ನೂತನ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದರು.

ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಾತೇಶ್ ಭಂಡಾರಿಯವರು ಯೋಜನೆಯು ನಡೆದು ಬಂದ ದಾರಿಯ ಬಗ್ಗೆ ತಿಳಿಸಿ, ಯೋಜನೆಯ ಸವಲತ್ತು ಬಗ್ಗೆ ಮಾಹಿತಿ ನೀಡಿದರು.

ಸುಮಂಗಳ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ ಅಧ್ಯಕ್ಷ ನಾಗೇಶ್ ಕೊಳಕೀರು ಮಾತಾಡಿ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಹಣದ ವ್ಯವಹಾರ ಮಾತ್ರವಲ್ಲದೆ ಸಂಸ್ಕಾರ ಯುಕ್ತ ಭಕ್ತಿಭಾವ ತುಂಬಿದ ಸಂಸ್ಥೆಯಾಗಿದೆ ಎಂದರು.
ಕಾರ್ಯಕ್ರಮದ ಮೊದಲು ಭಜನಾ ಸಂಕೀರ್ತನೆ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಝಾನ್ಸಿ ರಾಣಿ ಮಹಿಳಾ ಮಂಡಲದ ಅಧ್ಯಕ್ಷೆ ಮಿನಾಕ್ಷಿ ಆರ್ ಪೂಜಾರಿ,
ಕಟ್ಟಡದ ಮಾಲಿಕರಾದ ಲಲಿತಾ ಎಸ್ ರಾವ್, ಯೋಜನೆಯ ಕಲ್ಲಡ್ಕ ಗೋಳ್ತಮಜಲು ಘಟ ಸಮಿತಿಯ ಅಧ್ಯಕ್ಷರಾದ ಯಮುನ, ಬಂಟ್ಟಾಳ ತಾಲೂಕು ಮೇಲ್ವಿಚಾರಕಾರಕಿ ಜಯಲಕ್ಷ್ಮೀ ಪ್ರಭು, ಎಲ್ಲಾ ಗ್ರಾಮದ ವಲಯ ಸಂಯೋಜಕರು,ಸೇವಾದೀಕ್ಷಿತರು ಲೆಕ್ಕಪರಿಶೋಧಕರು ಹಾಗೂ ಗುರುಬಂಧುಗಳು ಉಪಸ್ಥಿತದ್ದರು.

ಸೇವಾದೀಕ್ಷಿತೆ ನಿಶಾ ರವರು ಸ್ವಾಗತಿಸಿ,
ಲೆಕ್ಕಪರಿಶೋದಕಿ ದಯಾ ವಂದಿಸಿದರು.
ಗೋಳ್ತಮಜಲು ಗ್ರಾಮದ ಸೇವಾದೀಕ್ಷಿತೆ ಶ್ಯಾಮಲ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!