ಬಂಟ್ವಾಳ : ಗ್ರಾಮೀಣ ಭಾಗದ ಜನರ ಅಭಿವೃದ್ಧಿಯ ದೃಷ್ಟಿಯಲ್ಲಿ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯು ಸಹಕಾರಿಯಾಗಿದೆ ಎಂದು ವಿಟ್ಲ ಕ್ಷೇತ್ರದ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಹೇಳಿದರು.
ಅವರು ಸೋಮವಾರ ಕಲ್ಲಡ್ಕ ಕೆಳಗಿನ ಪೇಟೆ ಲಲಿತಾ ಎಸ್ ರಾವ್ ರವರ ವಾಣಿಜ್ಯ ಸಂಕೀರ್ಣದಲ್ಲಿ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಕಲ್ಲಡ್ಕ ವಲಯದ ನೂತನ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದರು.
ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಾತೇಶ್ ಭಂಡಾರಿಯವರು ಯೋಜನೆಯು ನಡೆದು ಬಂದ ದಾರಿಯ ಬಗ್ಗೆ ತಿಳಿಸಿ, ಯೋಜನೆಯ ಸವಲತ್ತು ಬಗ್ಗೆ ಮಾಹಿತಿ ನೀಡಿದರು.
ಸುಮಂಗಳ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ ಅಧ್ಯಕ್ಷ ನಾಗೇಶ್ ಕೊಳಕೀರು ಮಾತಾಡಿ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಹಣದ ವ್ಯವಹಾರ ಮಾತ್ರವಲ್ಲದೆ ಸಂಸ್ಕಾರ ಯುಕ್ತ ಭಕ್ತಿಭಾವ ತುಂಬಿದ ಸಂಸ್ಥೆಯಾಗಿದೆ ಎಂದರು.
ಕಾರ್ಯಕ್ರಮದ ಮೊದಲು ಭಜನಾ ಸಂಕೀರ್ತನೆ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಝಾನ್ಸಿ ರಾಣಿ ಮಹಿಳಾ ಮಂಡಲದ ಅಧ್ಯಕ್ಷೆ ಮಿನಾಕ್ಷಿ ಆರ್ ಪೂಜಾರಿ,
ಕಟ್ಟಡದ ಮಾಲಿಕರಾದ ಲಲಿತಾ ಎಸ್ ರಾವ್, ಯೋಜನೆಯ ಕಲ್ಲಡ್ಕ ಗೋಳ್ತಮಜಲು ಘಟ ಸಮಿತಿಯ ಅಧ್ಯಕ್ಷರಾದ ಯಮುನ, ಬಂಟ್ಟಾಳ ತಾಲೂಕು ಮೇಲ್ವಿಚಾರಕಾರಕಿ ಜಯಲಕ್ಷ್ಮೀ ಪ್ರಭು, ಎಲ್ಲಾ ಗ್ರಾಮದ ವಲಯ ಸಂಯೋಜಕರು,ಸೇವಾದೀಕ್ಷಿತರು ಲೆಕ್ಕಪರಿಶೋಧಕರು ಹಾಗೂ ಗುರುಬಂಧುಗಳು ಉಪಸ್ಥಿತದ್ದರು.
ಸೇವಾದೀಕ್ಷಿತೆ ನಿಶಾ ರವರು ಸ್ವಾಗತಿಸಿ,
ಲೆಕ್ಕಪರಿಶೋದಕಿ ದಯಾ ವಂದಿಸಿದರು.
ಗೋಳ್ತಮಜಲು ಗ್ರಾಮದ ಸೇವಾದೀಕ್ಷಿತೆ ಶ್ಯಾಮಲ ಕಾರ್ಯಕ್ರಮ ನಿರೂಪಿಸಿದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…