ಕರಾವಳಿ ಮೂಲದ ಸಾಕಷ್ಟು ಕಲಾವಿದರು ಸಿನೆಮಾ ರಂಗದಲ್ಲಿ ದೊಡ್ಡಮಟ್ಟದ ಯಶಸ್ಸು ಪಡೆದು ಜಗತ್ತಿನ ಗಮನ ಸೆಳೆದಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಇದೀಗ ಮಂಗಳೂರು ಮೂಲದ ಮತ್ತೊಂದು ಪ್ರತಿಭಾವಂತರ ತಂಡ ಹೊಸ ಚಿತ್ರಕ್ಕೆ ಕೈಹಾಕಿದೆ. ಪಂಚರಂಗಿ ಫಿಲಂಸ್ ರವರ “ಅಮರ್ಥ” ನೂತನ ಕನ್ನಡ ಚಿತ್ರದ ಸ್ಕ್ರಿಪ್ಟ್ ಪೂಜೆ ಇಂದು ಸಹಿಹಿತ್ಲು ಭಗವತಿ ಕ್ಷೇತ್ರದಲ್ಲಿ ನಡೆಯಿತು. ಚಿತ್ರದ ನಿರ್ಮಾಪಕ ಕನ್ಯಾನ ಸದಾಶಿವ ಶೆಟ್ಟಿ ಕ್ಯಾಮೆರಾಗೆ ಚಾಲನೆ ನೀಡಿದರು. ಖ್ಯಾತ ನಟ, ವಿಮರ್ಷಕ ತಮ್ಮಣ್ಣ ಶೆಟ್ಟಿ ಕ್ಲಾಪ್ ಮಾಡಿ ಶುಭಹಾರೈಸಿದರು.ಬಳಿಕ ನಡೆದ ಸರಳ ಸಮಾರಂಭದಲ್ಲಿ ಕನ್ಯಾನ ಸದಾಶಿವ ಶೆಟ್ಟಿ ಮಾತನಾಡುತ್ತಾ, ಸಾಮಾಜಿಕವಾಗಿ ವಿವಿಧ ಕ್ಷೇತ್ರದಲ್ಲಿ ನಾನು ಸೇವೆ ಸಲ್ಲಿಸುತ್ತಿದ್ದೇನೆ. ಇದೀಗ ಸಿನೆಮಾ ರಂಗದಲ್ಲಿ ಕೈ ಹಾಕುವ ಪ್ರಯತ್ನ ಮಾಡುತ್ತಿದ್ದೇನೆ. ಸಿನೆಮಾವನ್ನು ಯಶಸ್ವಿಗೊಳಿಸುವುದು ಎಲ್ಲರ ಕೈಯ್ಯಲಿದೆ ಎಂದ ಅವರು, ಚಿತ್ರತಂಡಕ್ಕೆ ಶುಭ ಹಾರೈಸಿದರು..ಚಿತ್ರದ ನಿರ್ಮಾಪಕರು, ಚಿತ್ರತಂಡದಲ್ಲಿರುವ ಹೆಚ್ಚಿನವರು ನನ್ನ ಆತ್ಮೀಯರು. ಹೀಗಾಗಿ ನನಗೆ ಈ ಸಿನೆಮಾದ ಬಗ್ಗೆ ಹೆಚ್ಚು ಆಸಕ್ತಿ. ‘ಅಮರ್ಥ’ ಸಿನೆಮಾ ಕನ್ನಡ ಚಿತ್ರರಂಗದ ಸಮರ್ಥ ಚಿತ್ರವಾಗಲಿ ಎಂದು ಈ ವೇಳೆ ನಟ ಶಿವಧ್ವಜ್ ಶುಭ ಹಾರೈಸಿದರು.ಧಾರಾವಾಹಿ ಕಲಾವಿದ ಗುರುರಾಜ್ ಹೆಗಡೆಯವರು ಈ ಸಿನೆಮಾದ ನಿರ್ಮಾಪಕರಲ್ಲಿ ಒಬ್ಬರಾಗಿದ್ದು, ಚಿತ್ರಕಥೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು, ಪ್ರಾಸ್ಥಾವಿಕ ಮಾತುಗಳನ್ನು ಆಡಿದರು..ನಿರ್ದೇಶಕ ವಿನಯ್ ಪ್ರೀತಂ, ಸಿನೆಮಾದ ಕಲಾವಿದರು, ತಂತ್ರಜ್ಞರು, ದೇವಸ್ಥಾನದ ಆಡಳಿತ ಮಂಡಳಿಯವರು, ಸಿನೆಮಾ ಪ್ರಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…