ಕರಾವಳಿ ಮೂಲದ ಸಾಕಷ್ಟು ಕಲಾವಿದರು ಸಿನೆಮಾ ರಂಗದಲ್ಲಿ ದೊಡ್ಡಮಟ್ಟದ ಯಶಸ್ಸು ಪಡೆದು ಜಗತ್ತಿನ ಗಮನ ಸೆಳೆದಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಇದೀಗ ಮಂಗಳೂರು ಮೂಲದ ಮತ್ತೊಂದು ಪ್ರತಿಭಾವಂತರ ತಂಡ ಹೊಸ ಚಿತ್ರಕ್ಕೆ ಕೈಹಾಕಿದೆ. ಪಂಚರಂಗಿ ಫಿಲಂಸ್ ರವರ “ಅಮರ್ಥ” ನೂತನ ಕನ್ನಡ ಚಿತ್ರದ ಸ್ಕ್ರಿಪ್ಟ್ ಪೂಜೆ ಇಂದು ಸಹಿಹಿತ್ಲು ಭಗವತಿ ಕ್ಷೇತ್ರದಲ್ಲಿ ನಡೆಯಿತು. ಚಿತ್ರದ ನಿರ್ಮಾಪಕ ಕನ್ಯಾನ ಸದಾಶಿವ ಶೆಟ್ಟಿ ಕ್ಯಾಮೆರಾಗೆ ಚಾಲನೆ ನೀಡಿದರು. ಖ್ಯಾತ ನಟ, ವಿಮರ್ಷಕ ತಮ್ಮಣ್ಣ ಶೆಟ್ಟಿ ಕ್ಲಾಪ್ ಮಾಡಿ ಶುಭಹಾರೈಸಿದರು.ಬಳಿಕ ನಡೆದ ಸರಳ ಸಮಾರಂಭದಲ್ಲಿ ಕನ್ಯಾನ ಸದಾಶಿವ ಶೆಟ್ಟಿ ಮಾತನಾಡುತ್ತಾ, ಸಾಮಾಜಿಕವಾಗಿ ವಿವಿಧ ಕ್ಷೇತ್ರದಲ್ಲಿ ನಾನು ಸೇವೆ ಸಲ್ಲಿಸುತ್ತಿದ್ದೇನೆ. ಇದೀಗ ಸಿನೆಮಾ ರಂಗದಲ್ಲಿ ಕೈ ಹಾಕುವ ಪ್ರಯತ್ನ ಮಾಡುತ್ತಿದ್ದೇನೆ. ಸಿನೆಮಾವನ್ನು ಯಶಸ್ವಿಗೊಳಿಸುವುದು ಎಲ್ಲರ ಕೈಯ್ಯಲಿದೆ ಎಂದ ಅವರು, ಚಿತ್ರತಂಡಕ್ಕೆ ಶುಭ ಹಾರೈಸಿದರು..ಚಿತ್ರದ ನಿರ್ಮಾಪಕರು, ಚಿತ್ರತಂಡದಲ್ಲಿರುವ ಹೆಚ್ಚಿನವರು ನನ್ನ ಆತ್ಮೀಯರು. ಹೀಗಾಗಿ ನನಗೆ ಈ ಸಿನೆಮಾದ ಬಗ್ಗೆ ಹೆಚ್ಚು ಆಸಕ್ತಿ. ‘ಅಮರ್ಥ’ ಸಿನೆಮಾ ಕನ್ನಡ ಚಿತ್ರರಂಗದ ಸಮರ್ಥ ಚಿತ್ರವಾಗಲಿ ಎಂದು ಈ ವೇಳೆ ನಟ ಶಿವಧ್ವಜ್ ಶುಭ ಹಾರೈಸಿದರು.ಧಾರಾವಾಹಿ ಕಲಾವಿದ ಗುರುರಾಜ್ ಹೆಗಡೆಯವರು ಈ ಸಿನೆಮಾದ ನಿರ್ಮಾಪಕರಲ್ಲಿ ಒಬ್ಬರಾಗಿದ್ದು, ಚಿತ್ರಕಥೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು, ಪ್ರಾಸ್ಥಾವಿಕ ಮಾತುಗಳನ್ನು ಆಡಿದರು..ನಿರ್ದೇಶಕ ವಿನಯ್ ಪ್ರೀತಂ, ಸಿನೆಮಾದ ಕಲಾವಿದರು, ತಂತ್ರಜ್ಞರು, ದೇವಸ್ಥಾನದ ಆಡಳಿತ ಮಂಡಳಿಯವರು, ಸಿನೆಮಾ ಪ್ರಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…