ಜನ ಮನದ ನಾಡಿ ಮಿಡಿತ

Advertisement

ಕುಕ್ಕೆ:ಮೂಲ ಮೃತ್ತಿಕಾ ಪ್ರಸಾದ ವಿತರಣೆ: ಪವಿತ್ರ ಪ್ರಸಾದ ಪಡೆದ ಭಕ್ತರು..!

ಕಡಬ,ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಥಮ ಅಂಗವಾಗಿ ಕಾರ್ತಿಕ ಬಹುಳ ಏಕಾದಶಿಯ ದಿನವಾದ ಮಂಗಳವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಗರ್ಭಗುಡಿಯಿಂದ ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯ ಅವರು ಮೂಲಮೃತ್ತಿಕೆಯನ್ನು ಸುಮುಹೂರ್ತದಲ್ಲಿ ವಿವಿಧ ವೈಧಿಕ ವಿಧಾನಗಳ ಮೂಲಕ ತೆಗೆದರು. ಆರಂಭದಲ್ಲಿ ಶ್ರೀ ದೇವಳದ ಪುರೋಹಿತರಿಗೆ ಮತ್ತು ಆಡಳಿತ ಮಂಡಳಿಗೆ ಮೂಲಮೃತ್ತಿಕೆ ನೀಡಿದರು. ಬಳಿಕ ಭಕ್ತಾಧಿಗಳಿಗೆ ವಿತರಿಸಿದರು. ಶ್ರದ್ಧಾಭಕ್ತಿಯಿಂದ ಈ ಮಹಾಪ್ರಸಾದವನ್ನು ಭಕ್ತರು ಸ್ವೀಕರಿಸಿದರು.


ಸರದಿ ಸಾಲು:
ಸಹಸ್ರಾರು ಭಕ್ತರು ಬೆಳಗ್ಗೆ ೧೦ ಗಂಟೆಯಿAದಲೇ ಸರತಿ ಸಾಲಿನಲ್ಲಿ ನಿಂತು ಮೃತ್ತಿಕಾ ಪ್ರಸಾದ ಪಡೆದರು. ಹೆಚ್ಚಿನ ಸಂಖ್ಯೆಯಲ್ಲಿ ಊರ ಭಕ್ತಾಧಿಗಳು ಮೃತ್ತಿಕಾ ಪ್ರಸಾದ ಸ್ವೀಕರಿಸಿದರು. ಶ್ರೀದೇವಳದಲ್ಲಿ ಮೂಲಮೃತ್ತಿಕಾ ಪ್ರಸಾದ ತೆಗೆಯಲು ಇದ್ದುದರಿಂದ ಮಧ್ಯಾಹ್ನ ೨ ಗಂಟೆಯ ನಂತರ ಭಕ್ತಾಧಿಗಳಿಗೆ ಶ್ರೀ ದೇವರ ದರುಶನಕ್ಕೆ ಅವಕಾಶ ಮಾಡಲಾಯಿತು.ಏಕಾದಶಿ ದಿನವಾದುದರಿಂದ ಶ್ರೀ ದೇವರ ದರುಶನದ ಬಳಿಕ ಆಯ್ದ ಸೇವೆಗಳನ್ನು ಭಕ್ತರು ನೆರವೇರಿಸಿದರು.


ಈ ಸಂದರ್ಭ ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕಳ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷಿö್ಮಶ ಗಬ್ಲಡ್ಕ, ಕಡಬ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಮಾಸ್ಟರ್‌ಪ್ಲಾನ್ ಸಮಿತಿ ಸದಸ್ಯರಾದ ಸತೀಶ್ ಕೂಜುಗೋಡು, ಲೋಲಾಕ್ಷ ಕೈಕಂಬ,ಪವನ್ ಎಂ.ಡಿ, ಅಚ್ಚುತ ಆಲ್ಕಬೆ, ಸೇರಿದಂತೆ ದೇವಳದ ಸಿಬ್ಬಂದಿಗಳು, ಸಹಸ್ರಾರು ಭಕ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!