ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ : ಕಾರ್ಯಕರ್ತರ ಒಗ್ಗಟ್ಟಿನ ಶ್ರಮದಿಂದಾಗಿ ಸ್ಥಾನ ಉಳಿಸಲು ಸಾಧ್ಯವಾಯಿತು; ಮಿಥುನ್ ರೈ

ಬಿಜೆಪಿಯವರ ಕುತಂತ್ರದಿಂದಾಗಿ ಕಾಂಗ್ರೆಸ್ ಸದಸ್ಯರೊಬ್ಬರು ಸ್ಥಾನ ಕಳಕೊಂಡಿದ್ದರೂ, ಕಾರ್ಯಕರ್ತರ ಒಗ್ಗಟ್ಟಿನ ಪರಿಣಾಮದಿಂದಾಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಥಾನ ಉಳಿಸಿಕೊಳ್ಳಲು ಸಾಧ್ಯವಾಯಿತು ಮುಂದಿನ ದಿನದಲ್ಲಿ ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕ್ ಪಂಚಾಯತ್ ಚುನಾವಣೆಗೆ ಸಜ್ಜಾಗೋಣ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಮಿಥುನ್ ರೈ ನುಡಿದರು.

ಅವರು ಹಳೆಯಂಗಡಿ ಪಂಚಾಯತ್ ಎರಡನೇ ವಾರ್ಡಿನ ಉಪಚುನಾವಣೆಯಲ್ಲಿ ಜಯಭೇರಿಗಳಿಸಿದ ಶ್ರೀಮತಿ ಸುಚಿತ್ರ ಪ್ರಸನ್ನ ಕುಮಾರ್ ರವರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಕೆಪಿಸಿಸಿ ಸದಸ್ಯರಾದ ಎಚ್ ವಸಂತ್ ಬರ್ನಾಡ್ ಮಾತನಾಡಿ ಬಿಜೆಪಿ ಅವರ ಯಾವ ಕುತಂತ್ರಕ್ಕೂ ಮತದಾರರು ಬೆಲೆ ಕೊಡಲಿಲ್ಲ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಕಾರ್ಯಕ್ರಮದ ಮೇಲೆ ನಂಬಿಕೆ ಇಟ್ಟು ಮತ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೋಹನ್ ಕೋಟ್ಯಾನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಪದ್ಮಾವತಿ ಶೆಟ್ಟಿ ನಾಯಕರಾದ ಶಶಿೇಂದ್ರ ಎಂ ಸಾಲಿಯನ್, ಸದಸ್ಯರಾದ ಅಬ್ದುಲ್ ಖಾದರ್, ಅಬ್ದುಲ್ ಅಜಿಜ್ಯ್, ನಿರಂಜಲ ನೀತು ಶಶಿಕಲಾ ,ಅನಿಲ್ ಪೂಜಾರಿ, ಚಂದ್ರಕುಮಾರ್, ಮಾಜಿ ಅಧ್ಯಕ್ಷ ಜಲಜ ನಾಯಕರುಗಳಾದ ಧರ್ಮಾನಂದ ಶೆಟ್ಟಿಗಾರ್, ಸಂತೋಷ್ ಕೊಪ್ಪಳ ಪ್ರಸನ್ನಕುಮಾರ್, ಉತ್ತಮ್ ಕುಮಾರ್ ರಜಿಯಾ ಬಾನು ಮೊದಲಾದವರು ಇದ್ದರು

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!