ಬಿಜೆಪಿಯವರ ಕುತಂತ್ರದಿಂದಾಗಿ ಕಾಂಗ್ರೆಸ್ ಸದಸ್ಯರೊಬ್ಬರು ಸ್ಥಾನ ಕಳಕೊಂಡಿದ್ದರೂ, ಕಾರ್ಯಕರ್ತರ ಒಗ್ಗಟ್ಟಿನ ಪರಿಣಾಮದಿಂದಾಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಥಾನ ಉಳಿಸಿಕೊಳ್ಳಲು ಸಾಧ್ಯವಾಯಿತು ಮುಂದಿನ ದಿನದಲ್ಲಿ ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕ್ ಪಂಚಾಯತ್ ಚುನಾವಣೆಗೆ ಸಜ್ಜಾಗೋಣ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಮಿಥುನ್ ರೈ ನುಡಿದರು.
ಅವರು ಹಳೆಯಂಗಡಿ ಪಂಚಾಯತ್ ಎರಡನೇ ವಾರ್ಡಿನ ಉಪಚುನಾವಣೆಯಲ್ಲಿ ಜಯಭೇರಿಗಳಿಸಿದ ಶ್ರೀಮತಿ ಸುಚಿತ್ರ ಪ್ರಸನ್ನ ಕುಮಾರ್ ರವರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ಕೆಪಿಸಿಸಿ ಸದಸ್ಯರಾದ ಎಚ್ ವಸಂತ್ ಬರ್ನಾಡ್ ಮಾತನಾಡಿ ಬಿಜೆಪಿ ಅವರ ಯಾವ ಕುತಂತ್ರಕ್ಕೂ ಮತದಾರರು ಬೆಲೆ ಕೊಡಲಿಲ್ಲ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಕಾರ್ಯಕ್ರಮದ ಮೇಲೆ ನಂಬಿಕೆ ಇಟ್ಟು ಮತ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೋಹನ್ ಕೋಟ್ಯಾನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಪದ್ಮಾವತಿ ಶೆಟ್ಟಿ ನಾಯಕರಾದ ಶಶಿೇಂದ್ರ ಎಂ ಸಾಲಿಯನ್, ಸದಸ್ಯರಾದ ಅಬ್ದುಲ್ ಖಾದರ್, ಅಬ್ದುಲ್ ಅಜಿಜ್ಯ್, ನಿರಂಜಲ ನೀತು ಶಶಿಕಲಾ ,ಅನಿಲ್ ಪೂಜಾರಿ, ಚಂದ್ರಕುಮಾರ್, ಮಾಜಿ ಅಧ್ಯಕ್ಷ ಜಲಜ ನಾಯಕರುಗಳಾದ ಧರ್ಮಾನಂದ ಶೆಟ್ಟಿಗಾರ್, ಸಂತೋಷ್ ಕೊಪ್ಪಳ ಪ್ರಸನ್ನಕುಮಾರ್, ಉತ್ತಮ್ ಕುಮಾರ್ ರಜಿಯಾ ಬಾನು ಮೊದಲಾದವರು ಇದ್ದರು
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…