ಉರ್ವ, ನ.24: ರೋಟರ್ ಕ್ಲಬ್ ಮಂಗಳೂರು ಸೆಂಟ್ರಲ್, ರೋಟರಿ ಮಂಗಳೂರು ಸೆಂಟ್ರಲ್ -ಂಡೇಶನ್ ಮತ್ತು ರೋಟರ್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಇದರ ಸಂಯುಕ್ತಾಶ್ರಯದಲ್ಲಿ 24ನೇ ವಾರ್ಷಿಕ ‘ರೋಟರಿ ಚಿಣ್ಣರ ಉತ್ಸವ’ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧಾ ಕೂಟ ಉರ್ವ ಕೆನರಾ ಹೈಸ್ಕೂಲ್ ಆವರಣದಲ್ಲಿ ದಿನವಿಡೀ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಳ್ಳಬೇಕು. ಇದರಿಂದ ಶಾರೀರಿಕ ಮತ್ತು ದೈಹಿಕ ಬೆಳವಣಿಗೆ ಸಾಧ್ಯ. ಹೆತ್ತವರ ಪ್ರೀತಿ ವಾತ್ಸಲ್ಯದಿಂದ ವಂಚಿತ ಮಕ್ಕಳ ಉತ್ಸಾಹಕ್ಕೆ ಸ್ಪಂದಿಸಿ ಪ್ರೋತ್ಸಾಹ ನೀಡುವ ರೋಟರಿ ಸಂಸ್ಥೆಯ ನಿಸ್ವಾರ್ಥ ಸಮಾಜ ಸೇವಾ ಮನೋಭಾವ ಪ್ರಶಂಸನೀಯ ಎಂದು ಹೇಳಿದರು.
ಮುಖ್ಯ ಅತಿಥಿ ರೋಟರಿ ೩೧೮೧ ವಲಯ ೨ರ ಸಹಾಯಕ ಗವರ್ನರ್ ಕೃಷ್ಣ ಎಂ. ಹೆಗ್ಡೆ ಮಾತನಾಡಿ, ಕಳೆದ ೨೪ ವರ್ಷಗಳಿಂದ ರೋಟರಿ ಚಿಣ್ಣರ ಉತ್ಸವ ಆಯೋಜಿಸಿಕೊಂಡು ಬರುತ್ತಿದ್ದು, ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಇನ್ನಷ್ಟು ಮೆರುಗು ನೀಡಿದ್ದಾರೆ. ಪ್ರತೀ ವರ್ಷವೂ ವಿನೂತನ ಪರಿಕಲ್ಪನೆಯೊಂದಿಗೆ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಮಂಗಳೂರು ಸೆಂಟ್ರಲ್ ರೋಟರಿ ಕ್ಲಬ್ನ ಅಧ್ಯಕ್ಷ ಬ್ರಾಯಾನ್ ಪಿಂಟೋ ಅವರು ಅಧ್ಯಕ್ಷತೆ ವಹಿಸಿದ್ದರು.
ಚಿಣ್ಣರ ಉತ್ಸವದಲ್ಲಿ ೧೦ ಅನಾಥಾಶ್ರಮದ ಸುಮಾರು ೪೫೦ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿದರು. ಕ್ರೀಡಾ ಸ್ಪರ್ಧೆಗಳೊಂದಿಗೆ ಆರಂಭಗೊಂಡ ಉತ್ಸವ ಬಳಿಕ ಗಾನ, ನೃತ್ಯ, ನಾಟಕ ಸಹಿತ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮುಕ್ತಾಯಗೊಂಡಿತು.
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಕಾರ್ಯದರ್ಶಿಗಳಾದ ರಾಜೇಶ್ ಸೀತಾರಾಮ, ಮಂಗಳೂರು ಸೆಂಟ್ರಲ್ ಕಾರ್ಯದರ್ಶಿ ಅಕ್ಷಯ್ ಬಿ.ರೈ, ಚಿಣ್ಣರ ಬಣ್ಣ ಉತ್ಸವ ಚೇರ್ಮೆನ್ ರೊನಾಲ್ಡ್ ಮೆಂಡೋನ್ಸಾ, ರೋಟರಿ ಮಂಗಳೂರು ಸೆಂಟ್ರಲ್ -ಂಡೇಶನ್ ಅಧ್ಯಕ್ಷ, ಕ್ಲಬ್ನ ಸ್ಥಾಪಕಾಧ್ಯಕ್ಷ ಪ್ರೇಮನಾಥ ಕುಡ್ವ, ರೋಟರ್ಯಾಕ್ಟ್ ಕ್ಲಬ್ ಮಾಜಿ ಅಸಿಸ್ಟೆಂಟ್ ಗವರ್ನರ್ ರಾಜ್ ಗೋಪಾಲ್ ರೈ, ಮಾಜಿ ಅಧ್ಯಕ್ಷ ರಾಜೇಶ್ ಶೆಟ್ಟಿ, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಕಾರ್ಯಕ್ರಮ ಸಂಯೋಜಕ ಕರಣ್ ಜೈನ್, ಪ್ರಮುಖರಾದ ಸಾಯಿಬಾಬ ರಾವ್, ರಾಮ್ದಾಸ್, ರವಿಜಲನ್, ಜಗನ್ನಾಥ ಶೆಟ್ಟಿ, ಶೆಲ್ಡನ್ ಕ್ರಾಸ್ತಾ, ಜನಾರ್ದನ ಆಳ್ವ, ವಿಕಾಸ್, ಪೂರ್ಣಿಮ ರೈ, ಪ್ರಮೀಳ ಸಹಿತ ಮತ್ತಿತರರು ಇದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…