ಇತರೆ

ನಗ್ರಿ ಯವರಿಗೆ ಕದ್ರಿ ವಿಷ್ಣು ಪ್ರಶಸ್ತಿ ಪ್ರದಾನ

ಶ್ರೀ ಕಟೀಲು ಮೇಳದಲ್ಲಿ ನಿರಂತರ 35 ವರ್ಷ ಗಳಿಂದ ಕಲಾ ಸೇವೆ ಗೈಯುತ್ತಿರುವ ಬಣ್ಣದ ವೇಷಧಾರಿ ಶ್ರೀ ನಗ್ರಿ ಮಹಾಬಲ ರೈ ಅವರಿಗೆ ಕದ್ರಿ ಯಕ್ಷ ಬಳಗವು ಪ್ರತಿಷ್ಠಿತ ” ಕದ್ರಿ ವಿಷ್ಣು ಪ್ರಶಸ್ತಿ -2024″.ನೀಡಿ ಗೌರವಿಸಿತು.ಕದ್ರಿ ಯಕ್ಷ ಬಳಗ ವು ಶ್ರೀ ಕಟೀಲು ಮೇಳದ ಸೇವೆ ಆಟ ದ ಸಂದರ್ಭದಲ್ಲಿ ಕಳೆದ ಒoಭತ್ತು ವರ್ಷ ಗಳಿಂದ ನಿರಂತರ ವಾಗಿ ಕದ್ರಿ ವಿಷ್ಣು ಪ್ರಶಸ್ತಿ ನೀಡುತ್ತಿದೆ.

ಕದ್ರಿ ವಿಷ್ಣು ಸಂಸ್ಮರಣೆ
ಇಚ್ಲಂಪಾಡಿ, ಕೂಡ್ಲು,ಕೊರಕೋಡು, ಅಡೂರು, ಕುಂಡಾವು, ಕದ್ರಿ,ಧರ್ಮಸ್ಥಳ,ಕಟೀಲು ಮೇಳಗಳಲ್ಲಿ ತೆಂಕು ತಿಟ್ಟಿನ ರಾಜಕಿರೀಟ ವೇಷದಲ್ಲಿ ಅಪೂರ್ವ ಸಾಧನೆ ಗೈದಿದ್ದ, ಅರ್ಜುನ, ಋತುಪರ್ಣ, ಇಂದ್ರಜಿತು,ಹಿರಣ್ಯಾಕ್ಷ ಮೊದಲಾದ ಪಾತ್ರಗಳಲ್ಲಿ ಮೆರದಿದ್ದ ಮೇರು ಕಲಾವಿದ ಕದ್ರಿ ವಿಷ್ಣು ಸಂಸ್ಮರಣೆಯು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸಹಭಾಗಿತ್ವದಲ್ಲಿ, ಸದಸ್ಯ ಮೋಹನ್ ಕೊಪ್ಪಳ ಕದ್ರಿ ಅವರ ಉಪಸ್ಥಿತಿಯಲ್ಲಿ ನಡೆಯಿತು.

ಯಕ್ಷ ಬಳಗದ ಅಧ್ಯಕ್ಷ ಕದ್ರಿ ನವನೀತ ಶೆಟ್ಟಿ ಅವರು
” ಸುಬ್ರಮಣ್ಯ, ಧರ್ಮಸ್ಥಳ ಹಾಗೂ ಕಟೀಲು ಮೇಳಗಳಲ್ಲಿ ಒಟ್ಟು ಐದುವರೆ ದಶಕಗಳಿಂದ ತೆಂಕುತಿಟ್ಟಿನ ಪರಂಪರೆಯ ಬಣ್ಣದ ವೇಷಧಾರಿಯಾಗಿ ಯಕ್ಷ ಕಲಾಯಾನ ವನ್ನು ಮುನ್ನಡೆಸುತ್ತಿರುವ ನಗ್ರಿ ಮಹಾಬಲ ರೈ ಅವರು ಕಟೀಲು ಮೇಳದಲ್ಲಿ ನಿರಂತರ 34 ತಿರುಗಾಟವನ್ನು ಪೂರೈಸಿದ್ದಾರೆ.
ಶ್ರೀ ದೇವಿ ಮಹಾತ್ಮೆಯ ಮಹಿಷಾಸುರ ಪಾತ್ರ ನಿರ್ವಹಣೆ ಯಲ್ಲಿ ಸಿದ್ದಿ ಪ್ರಸಿದ್ದಿ ಪಡೆದಿದ್ದಾರೆ ” ಎಂದು ಅಭಿನಂದಿಸಿದರು.

ಭಾಸ್ಕರ ಶೆಟ್ಟಿ ಗುರುದೇವ್ ಕಲ್ಯಾಣ್, ಸೀತಾರಾಮ್ ಅರೆಕೆರೆಬೈಲ್, ರವೀಂದ್ರನಾಥ ಶೆಟ್ಟಿ ಮುಂಡ್ಕೂರು ದೊಡ್ಡಮನೆ, ಗೋಕುಲ್ ಕದ್ರಿ,ಬೆಟ್ಟoಪಾಡಿ ಸುಂದರ ಶೆಟ್ಟಿ,ಜಯಶೀಲ ಅಡ್ಯoತಾಯ, ತಾರಾನಾಥ್ ಶೆಟ್ಟಿ ಬೋಳಾರ, ರಾಮಚಂದ್ರ ಭಟ್ ಎಲ್ಲೂರು,ನಿವೇದಿತಾ ಶೆಟ್ಟಿ, ಭಾಸ್ಕರ ರೈ ಕುಕ್ಕುವಳ್ಳಿ, ಹರೀಶ್ ಕುಮಾರ್ ಚಿತ್ರಾಪುರ, ಮೂಲ್ಕಿ ಕರುಣಾಕರ ಶೆಟ್ಟಿ,ಪಣಂಬೂರು ಶ್ರೀಧರ ಐತಾಳ, ಸುಧಾಕರ ಶೆಟ್ಟಿ ದೋಣಿoಜೆ,ನಾಗೇಶ್ ಭಂಡಾರಿ ಡೊಂಬಿವಿಲಿ ಉಪಸ್ಥಿತರಿದ್ದರು.

ಶಿವಪ್ರಸಾದ್ ಪ್ರಭು ಸ್ವಾಗತಿಸಿದರು. ಸುಧಾಕರ ರಾವ್ ಪೇಜಾವರ ಕದ್ರಿ ವಿಷ್ಣು ಸಂಸ್ಮರಣೆ ಮಾಡಿದರು. ಪ್ರದೀಪ್ ಆಳ್ವ ಕದ್ರಿ ಸನ್ಮಾನ ಪತ್ರ ವಾಚಿಸಿದರು. ಪುರುಷೋತ್ತಮ ಭಂಡಾರಿ ಅಡ್ಯಾರ್ ಕಾರ್ಯಕ್ರಮ ಸಂಯೋಜಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…

10 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…

11 hours ago

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…

16 hours ago

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…

1 day ago

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…

5 days ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…

6 days ago