ಮಂಗಳೂರು; ಮಂಗಳೂರಿನ ಕೆಎಂಸಿಯ ಎಆರ್ಒಐಯು ಮತ್ತು ಎಆರ್ಒಐ ಕರ್ನಾಟಕ ವಿಭಾಗದ ಆಯೋಜನೆಯಲ್ಲಿ ಅಸೋಸಿಯೇಷನ್ ಆಫ್ ರೇಡಿಯೇಷನ್ ಆಂಕಾಲಜಿಸ್ಟ್ ಆಫ್ ಇಂಡಿಯಾದ ೪೪ನೇ ವಾರ್ಷಿಕ ಸಮ್ಮೇಳನ ‘ಆರೋಕಾನ್-2024’ ಮಂಗಳೂರಿನ ಡಾ. ಟಿಎಂಎ ಪೈ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ ನ.೨೯ರಂದು ಜರಗಲಿದೆ.
ಸಮ್ಮೇಳನದ ಉದ್ಘಾಟನಾ ಸಮಾರಂಭ ಸಂಜೆ ೬ಕ್ಕೆ ನಡೆಯಲಿದ್ದು ಮುಖ್ಯ ಅತಿಥಿಯಾಗಿ ಭಾರತ ಸರಕಾರದ ಅಟೋಮಿಕ್ ಎನರ್ಜಿ ರೆಗ್ಯುಲೇಟರಿ ಬೋರ್ಡ್(ಎಇಆರ್ಬಿ)ನ ಚೇರ್ಮೆನ್ ದಿನೇಶ್ ಕುಮಾರ್ ಶುಕ್ಲಾ, ಗೌರವ ಅತಿಥಿಗಳಾಗಿ ಸಶಸ್ತ್ರ ಬಲದ ಮೆಡಿಕಲ್ ಸರ್ವೀಸಸ್ನ ಡೈರೆಕ್ಟರ್ ಜನರಲ್ ಸರ್ಜನ್ ವೈಸ್ ಆಡ್ಮಿರಲ್ ಡಾ. ಆರ್ತಿ ಸರೀನ್, ಪಿಜಿ ಮೆಡಿಕಲ್ ಎಜುಕೇಷನ್ ಬೋರ್ಡ್ ನ್ಯಾಷನಲ್ ಮೆಡಿಕಲ್ ಕಮಿಷನ್ನ ಅಧ್ಯಕ್ಷ ಡಾ. ವಿಜಯ್ ಓಝಾ, ಮಾಹೆ ಕುಲಪತಿ ಲೆ. ಜ. ಡಾ. ಎಂ.ಡಿ.ವೆಂಕಟೇಶ್ ಪಾಲ್ಗೊಳ್ಳಲಿದ್ದಾರೆ ಎಂದು ಕೆಎಂಸಿ ಮಂಗಳೂರಿನ ಡೀನ್ ಡಾ. ಬಿ.ಉಣ್ಣಿಕೃಷ್ಣನ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಮ್ಮೇಳನದಲ್ಲಿ ರೇಡಿಯೇಷನ್ ಆಂಕಾಲಜಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ದೇಶ ವಿದೇಶಗಳ ಸಾವಿರಾರು ಸಂಶೋಧಕರು, ತಜ್ಞರು, ವೃತ್ತಿಪರರು ಪಾಲ್ಗೊಳ್ಳಲಿದ್ದಾರೆ. ನ.೨೮ರಂದು ಇಂಡಿಯನ್ ಕಾಲೇಜ್ ಆಫ್ ರೇಡಿಯೇಷನ್ ಆಂಕಾಲಜಿ ವತಿಯಿಂದ ಕಾರ್ಯಾಗಾರ ನಡೆಯಲಿದೆ ಎಂದರು.
ಸಮ್ಮೇಳನ ಸಂಘಟನಾ ಮುಖ್ಯಸ್ಥ ಡಾ. ಎಂ.ಎಸ್.ಅತಿಯಾಮಾನ್ ಮಾತನಾಡಿ, ಒಟ್ಟಾರೆಯಾಗಿ ಕ್ಯಾನ್ಸರ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಕ್ಯಾನ್ಸರ್ ಕುರಿತಾದ ಜಾಗೃತಿಯಿಂದಾಗಿ ತಪಾಸಣೆ ಮಾಡಿಕೊಳ್ಳುತ್ತಿರುವವರ ಪ್ರಮಾಣ ಹೆಚ್ಚಾಗಿರುವುದು ಕೂಡ ಇದಕ್ಕೆ ಕಾರಣ. ಸಾಮಾನ್ಯವಾಗಿ ಕ್ಯಾನ್ಸರ್ನ್ನು ಪ್ರಥಮ ಹಂತದಲ್ಲಿ ಪತ್ತೆ ಹಚ್ಚಿದರೆ ಗುಣಪಡಿಸಬಹುದಾದ ಸಾಧ್ಯತೆ ಶೇ.೮೦ರಿಂದ ೮೫ ಇರುತ್ತದೆ. ನಾಲ್ಕನೇ ಹಂತದಲ್ಲಿ ಈ ಪ್ರಮಾಣ ಶೇ.೬೦ರಷ್ಟಿರುತ್ತದೆ. ಅತ್ತಾವರ ಕೆಎಂಸಿ ವತಿಯಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ನ ಉಚಿತ ತಪಾಸಣೆಗೆ ಹೊರರೋಗಿ ವಿಭಾಗ ಕಾರ್ಯಾಚರಿಸುತ್ತಿದೆ. ಅಗತ್ಯ ಬಿದ್ದರೆ ಆಯುಷ್ಮಾನ್ನಡಿ ಕೆಎಂಸಿಯಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ದೇಶದಲ್ಲಿ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್, ಗರ್ಭಕೋಶದ ಕ್ಯಾನ್ಸರ್ ಪ್ರಕರಣಗಳು ಕೂಡ ಹೆಚ್ಚಾಗಿವೆ. ವ್ಯಾಯಾಮ ಇಲ್ಲದಿರುವುದು, ಒತ್ತಡದ ಜೀವನಶೈಲಿ, ಜಂಕ್ ಫುಡ್ಗಳ ಸೇವನೆ ಮೊದಲಾದವು ಕ್ಯಾನ್ಸರ್ಗೆ ಕಾರಣವಾಗುತ್ತಿವೆ. ತಂಬಾಕು ಸೇವನೆಯಿಂದಾಗಿ ಬಾಯಿಯ ಕ್ಯಾನ್ಸರ್ ಉಂಟಾಗುತ್ತಿದೆ. ತಪಾಸಣೆಗಳನ್ನು ನಡೆಸುವುದರಿಂದ ಕ್ಯಾನ್ಸರ್ನ ಪೂರ್ವ ಹಂತದಲ್ಲೇ ಪತ್ತೆ ಹಚ್ಚಲು ಸಾಧ್ಯ. ಒಂದು ವೇಳೆ ಕ್ಯಾನ್ಸರ್ನ ಹಂತ ತಲುಪಿದ್ದರೂ ಪರಿಣಾಮಕಾರಿ ಚಿಕಿತ್ಸೆ ನೀಡಬಹುದಾಗಿದೆ. ಈ ಬಗ್ಗೆ ಜಾಗೃತಿ, ತಪಾಸಣೆ ಮೂಡಿಸಲು ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ನ.೨೯ರಂದು ನಡೆಯಲಿರುವ ಸಮ್ಮೇಳನವು ಕ್ಯಾನ್ಸರ್ ಚಿಕಿತ್ಸೆಯಲ್ಲಿ ಜಗತ್ತಿನಾದ್ಯಂತ ನಡೆದಿರುವ ಅತ್ಯಾಧುನಿಕ ಬೆಳವಣಿಗೆಗಳ ಬಗ್ಗೆಯೂ ಬೆಳಕು ಚೆಲ್ಲಲಿದೆ ಎಂದು ತಿಳಿಸಿದರು.
ಡಾ. ದಿಲ್ಸನ್ ಲೋಬೊ ಉಪಸ್ಥಿತರಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…