ಕರಾವಳಿ

ಅಸೋಸಿಯೇಷನ್ ಆಫ್ ರೇಡಿಯೇಷನ್ ಆಂಕಾಲಜಿಸ್ಟ್ ಆಫ್ ಇಂಡಿಯಾದ 44ನೇ ವಾರ್ಷಿಕ ಸಮ್ಮೇಳನ ‘ ‘ಆರೋಕಾನ್-2024’

 ಮಂಗಳೂರು;  ಮಂಗಳೂರಿನ ಕೆಎಂಸಿಯ ಎಆರ್‌ಒಐಯು ಮತ್ತು ಎಆರ್‌ಒಐ ಕರ್ನಾಟಕ ವಿಭಾಗದ ಆಯೋಜನೆಯಲ್ಲಿ ಅಸೋಸಿಯೇಷನ್ ಆಫ್ ರೇಡಿಯೇಷನ್ ಆಂಕಾಲಜಿಸ್ಟ್ ಆಫ್ ಇಂಡಿಯಾದ ೪೪ನೇ ವಾರ್ಷಿಕ ಸಮ್ಮೇಳನ ‘ಆರೋಕಾನ್-2024’ ಮಂಗಳೂರಿನ ಡಾ. ಟಿಎಂಎ ಪೈ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ ನ.೨೯ರಂದು ಜರಗಲಿದೆ.


ಸಮ್ಮೇಳನದ ಉದ್ಘಾಟನಾ ಸಮಾರಂಭ ಸಂಜೆ ೬ಕ್ಕೆ ನಡೆಯಲಿದ್ದು ಮುಖ್ಯ ಅತಿಥಿಯಾಗಿ ಭಾರತ ಸರಕಾರದ ಅಟೋಮಿಕ್ ಎನರ್ಜಿ ರೆಗ್ಯುಲೇಟರಿ ಬೋರ್ಡ್(ಎಇಆರ್ಬಿ)ನ ಚೇರ್ಮೆನ್ ದಿನೇಶ್ ಕುಮಾರ್ ಶುಕ್ಲಾ, ಗೌರವ ಅತಿಥಿಗಳಾಗಿ ಸಶಸ್ತ್ರ ಬಲದ ಮೆಡಿಕಲ್ ಸರ್ವೀಸಸ್ನ ಡೈರೆಕ್ಟರ್ ಜನರಲ್ ಸರ್ಜನ್ ವೈಸ್ ಆಡ್ಮಿರಲ್ ಡಾ. ಆರ್ತಿ ಸರೀನ್, ಪಿಜಿ ಮೆಡಿಕಲ್ ಎಜುಕೇಷನ್ ಬೋರ್ಡ್ ನ್ಯಾಷನಲ್ ಮೆಡಿಕಲ್ ಕಮಿಷನ್ನ ಅಧ್ಯಕ್ಷ ಡಾ. ವಿಜಯ್ ಓಝಾ, ಮಾಹೆ ಕುಲಪತಿ ಲೆ. ಜ. ಡಾ. ಎಂ.ಡಿ.ವೆಂಕಟೇಶ್ ಪಾಲ್ಗೊಳ್ಳಲಿದ್ದಾರೆ ಎಂದು ಕೆಎಂಸಿ ಮಂಗಳೂರಿನ ಡೀನ್ ಡಾ. ಬಿ.ಉಣ್ಣಿಕೃಷ್ಣನ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಮ್ಮೇಳನದಲ್ಲಿ ರೇಡಿಯೇಷನ್ ಆಂಕಾಲಜಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ದೇಶ ವಿದೇಶಗಳ ಸಾವಿರಾರು ಸಂಶೋಧಕರು, ತಜ್ಞರು, ವೃತ್ತಿಪರರು ಪಾಲ್ಗೊಳ್ಳಲಿದ್ದಾರೆ. ನ.೨೮ರಂದು ಇಂಡಿಯನ್ ಕಾಲೇಜ್ ಆಫ್ ರೇಡಿಯೇಷನ್ ಆಂಕಾಲಜಿ ವತಿಯಿಂದ ಕಾರ್ಯಾಗಾರ ನಡೆಯಲಿದೆ ಎಂದರು.
ಸಮ್ಮೇಳನ ಸಂಘಟನಾ ಮುಖ್ಯಸ್ಥ ಡಾ. ಎಂ.ಎಸ್.ಅತಿಯಾಮಾನ್ ಮಾತನಾಡಿ, ಒಟ್ಟಾರೆಯಾಗಿ ಕ್ಯಾನ್ಸರ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಕ್ಯಾನ್ಸರ್ ಕುರಿತಾದ ಜಾಗೃತಿಯಿಂದಾಗಿ ತಪಾಸಣೆ ಮಾಡಿಕೊಳ್ಳುತ್ತಿರುವವರ ಪ್ರಮಾಣ ಹೆಚ್ಚಾಗಿರುವುದು ಕೂಡ ಇದಕ್ಕೆ ಕಾರಣ. ಸಾಮಾನ್ಯವಾಗಿ ಕ್ಯಾನ್ಸರ್ನ್ನು ಪ್ರಥಮ ಹಂತದಲ್ಲಿ ಪತ್ತೆ ಹಚ್ಚಿದರೆ ಗುಣಪಡಿಸಬಹುದಾದ ಸಾಧ್ಯತೆ ಶೇ.೮೦ರಿಂದ ೮೫ ಇರುತ್ತದೆ. ನಾಲ್ಕನೇ ಹಂತದಲ್ಲಿ ಈ ಪ್ರಮಾಣ ಶೇ.೬೦ರಷ್ಟಿರುತ್ತದೆ. ಅತ್ತಾವರ ಕೆಎಂಸಿ ವತಿಯಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ನ ಉಚಿತ ತಪಾಸಣೆಗೆ ಹೊರರೋಗಿ ವಿಭಾಗ ಕಾರ್ಯಾಚರಿಸುತ್ತಿದೆ. ಅಗತ್ಯ ಬಿದ್ದರೆ ಆಯುಷ್ಮಾನ್ನಡಿ ಕೆಎಂಸಿಯಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ದೇಶದಲ್ಲಿ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್, ಗರ್ಭಕೋಶದ ಕ್ಯಾನ್ಸರ್ ಪ್ರಕರಣಗಳು ಕೂಡ ಹೆಚ್ಚಾಗಿವೆ. ವ್ಯಾಯಾಮ ಇಲ್ಲದಿರುವುದು, ಒತ್ತಡದ ಜೀವನಶೈಲಿ, ಜಂಕ್ ಫುಡ್ಗಳ ಸೇವನೆ ಮೊದಲಾದವು ಕ್ಯಾನ್ಸರ್ಗೆ ಕಾರಣವಾಗುತ್ತಿವೆ. ತಂಬಾಕು ಸೇವನೆಯಿಂದಾಗಿ ಬಾಯಿಯ ಕ್ಯಾನ್ಸರ್ ಉಂಟಾಗುತ್ತಿದೆ. ತಪಾಸಣೆಗಳನ್ನು ನಡೆಸುವುದರಿಂದ ಕ್ಯಾನ್ಸರ್ನ ಪೂರ್ವ ಹಂತದಲ್ಲೇ ಪತ್ತೆ ಹಚ್ಚಲು ಸಾಧ್ಯ. ಒಂದು ವೇಳೆ ಕ್ಯಾನ್ಸರ್ನ ಹಂತ ತಲುಪಿದ್ದರೂ ಪರಿಣಾಮಕಾರಿ ಚಿಕಿತ್ಸೆ ನೀಡಬಹುದಾಗಿದೆ. ಈ ಬಗ್ಗೆ ಜಾಗೃತಿ, ತಪಾಸಣೆ ಮೂಡಿಸಲು ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ನ.೨೯ರಂದು ನಡೆಯಲಿರುವ ಸಮ್ಮೇಳನವು ಕ್ಯಾನ್ಸರ್ ಚಿಕಿತ್ಸೆಯಲ್ಲಿ ಜಗತ್ತಿನಾದ್ಯಂತ ನಡೆದಿರುವ ಅತ್ಯಾಧುನಿಕ ಬೆಳವಣಿಗೆಗಳ ಬಗ್ಗೆಯೂ ಬೆಳಕು ಚೆಲ್ಲಲಿದೆ ಎಂದು ತಿಳಿಸಿದರು.
ಡಾ. ದಿಲ್ಸನ್ ಲೋಬೊ ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…

11 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…

12 hours ago

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…

17 hours ago

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…

1 day ago

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…

5 days ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…

6 days ago