ಜನ ಮನದ ನಾಡಿ ಮಿಡಿತ

Advertisement

ಸರ್ವೋತ್ತಮ ಶೆಟ್ಟಿಯವರಿಗೆ ಗಲ್ಫ್ ಬಂಟೋತ್ಸವ-2024 ಕಾರ್ಯಕ್ರಮದಲ್ಲಿ ವಿನೂತನ ರೀತಿಯಲ್ಲಿ ಸನ್ಮಾನ

ದುಬೈ : ಮರಳು ಭೂಮಿಯಲ್ಲಿ ಕಳೆದ 47 ವರ್ಷದಿಂದ ಯುಎಇ ಬಂಟ್ಸ್ ನ ನಾಯಕನಾಗಿ ನಡೆಸಿಕೊಂಡು ಬರುತ್ತಿರುವ ಸರ್ವೋತ್ತಮ ಶೆಟ್ಟಿಯವರನ್ನು ಗಲ್ಫ್ ಬಂಟೋತ್ಸವ-2024 ಕಾರ್ಯಕ್ರಮದಲ್ಲಿ ವಿನೂತನ ರೀತಿಯಲ್ಲಿ ಸನ್ಮಾನಿಸಲಾಯಿತು.


ಸರ್ವೋತ್ತಮ ಶೆಟ್ಟಿ ದಂಪತಿಗಳನ್ನು ಬಂಟ್ಸ್ ನ ಸಂಘಟನ ಸಮಿತಿ ಹಾಗೂ ಸಲಹಾ ಸಮಿತಿ ಮತ್ತು ಕಾರ್ಯಕರ್ತರು ಸೇರಿ ಮಾಡಿದ ಅದ್ದೂರಿಯ ಸನ್ಮಾನದಲ್ಲಿ ಸಮಿತಿಯ ಪದಾಧಿಕಾರಿಗಳು,ಸರ್ವ ಸದಸ್ಯರು ಉಪಸ್ಥಿತರಿದ್ದರು.
ವಿನೂತನ ಶೈಲಿಯಲ್ಲಿ ಸನ್ಮಾನ: ಸರ್ವೋತ್ತಮ ಶೆಟ್ಟಿಯವರ ಸನ್ಮಾನದ ಪೇಟ,ಶಾಲು,ಸ್ಮರಣಿಕೆ,ಗೆಂದಳೆ ಸೀಯಳ,ಅಡಕೆ,ಬಾಳೆ ಗೊಣೆ,ತರಕಾರಿ ಬುಟ್ಟಿ,ಹಣ್ಣು ಹಂಪಲು,ಅಕ್ಕಿ ಮುಡಿ,ಭತ್ತ ಮುಡಿ,ಹಿಂಗಾರ,ಮಲ್ಲಿಗೆ ಹಾರ, ಬಣ್ಣದ ಕೊಡೆ,ಚೆಂಡೆ ವಾಲಗದೊಂದಿಗೆ ವೇದಿಕೆಗೆ ಮೆರವಣಿಗೆಯ ಮೂಲಕ ತರಲಾಯಿತು.


ವೇದಿಕೆಯಲ್ಲಿದ್ದ ಯುಎಇ ಬಂಟ್ಸ್ ನ ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿ,ಕಾರ್ಯದರ್ಶಿ ರವಿರಾಜ್ ಶೆಟ್ಟಿ, ಸಮಿತಿಯ ಪೋಷಕರು,ಸಂಘಟನ ಸಮಿತಿಯ ಪದಾಧಿಕಾರಿಗಳು ವ್ಯವಸ್ಥಿತವಾಗಿ ಒಂದೊಂದು ವಸ್ತುಗಳನ್ನು ಸರ್ವೋತ್ತಮ ಶೆಟ್ಟಿ ಮತ್ತು ಶ್ರೀಮತಿ ಉಷ ಶೆಟ್ಟಿಯವರಿಗೆ ಅರ್ಪಿಸಿ ಗೌರವ ಸಲ್ಲಿಸಿ ಸನ್ಮಾನಿಸಲಾಯಿತು.ಶ್ರೀಮತಿ ಶಶಿ ರವಿರಾಜ್ ಶೆಟ್ಟಿ ಸನ್ಮಾನ ಪತ್ರ ವಾಚಿಸಿದರು,ನಿತೇಶ್ ಶೆಟ್ಟಿ ಎಕ್ಕಾರ್ ಮತ್ತು ನಮ್ಮ ಕುಡ್ಲ ಚಾನೆಲ್ ನ ವಾರ್ತಾ ವಾಚಕಿ ಶ್ರೀಮತಿ ಪ್ರೀಯ ಹರೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು ಕಾರ್ಯಕ್ರಮ ನಿರೂಪಿಸಿದರು.

ವರದಿ: ವಿಜಯಕುಮಾರ್ ಶೆಟ್ಟಿ ಗಾಣದಮೂಲೆ (ದುಬೈ)

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!