ದುಬೈ : ಮರಳು ಭೂಮಿಯಲ್ಲಿ ಕಳೆದ 47 ವರ್ಷದಿಂದ ಯುಎಇ ಬಂಟ್ಸ್ ನ ನಾಯಕನಾಗಿ ನಡೆಸಿಕೊಂಡು ಬರುತ್ತಿರುವ ಸರ್ವೋತ್ತಮ ಶೆಟ್ಟಿಯವರನ್ನು ಗಲ್ಫ್ ಬಂಟೋತ್ಸವ-2024 ಕಾರ್ಯಕ್ರಮದಲ್ಲಿ ವಿನೂತನ ರೀತಿಯಲ್ಲಿ ಸನ್ಮಾನಿಸಲಾಯಿತು.
ಸರ್ವೋತ್ತಮ ಶೆಟ್ಟಿ ದಂಪತಿಗಳನ್ನು ಬಂಟ್ಸ್ ನ ಸಂಘಟನ ಸಮಿತಿ ಹಾಗೂ ಸಲಹಾ ಸಮಿತಿ ಮತ್ತು ಕಾರ್ಯಕರ್ತರು ಸೇರಿ ಮಾಡಿದ ಅದ್ದೂರಿಯ ಸನ್ಮಾನದಲ್ಲಿ ಸಮಿತಿಯ ಪದಾಧಿಕಾರಿಗಳು,ಸರ್ವ ಸದಸ್ಯರು ಉಪಸ್ಥಿತರಿದ್ದರು.
ವಿನೂತನ ಶೈಲಿಯಲ್ಲಿ ಸನ್ಮಾನ: ಸರ್ವೋತ್ತಮ ಶೆಟ್ಟಿಯವರ ಸನ್ಮಾನದ ಪೇಟ,ಶಾಲು,ಸ್ಮರಣಿಕೆ,ಗೆಂದಳೆ ಸೀಯಳ,ಅಡಕೆ,ಬಾಳೆ ಗೊಣೆ,ತರಕಾರಿ ಬುಟ್ಟಿ,ಹಣ್ಣು ಹಂಪಲು,ಅಕ್ಕಿ ಮುಡಿ,ಭತ್ತ ಮುಡಿ,ಹಿಂಗಾರ,ಮಲ್ಲಿಗೆ ಹಾರ, ಬಣ್ಣದ ಕೊಡೆ,ಚೆಂಡೆ ವಾಲಗದೊಂದಿಗೆ ವೇದಿಕೆಗೆ ಮೆರವಣಿಗೆಯ ಮೂಲಕ ತರಲಾಯಿತು.
ವೇದಿಕೆಯಲ್ಲಿದ್ದ ಯುಎಇ ಬಂಟ್ಸ್ ನ ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿ,ಕಾರ್ಯದರ್ಶಿ ರವಿರಾಜ್ ಶೆಟ್ಟಿ, ಸಮಿತಿಯ ಪೋಷಕರು,ಸಂಘಟನ ಸಮಿತಿಯ ಪದಾಧಿಕಾರಿಗಳು ವ್ಯವಸ್ಥಿತವಾಗಿ ಒಂದೊಂದು ವಸ್ತುಗಳನ್ನು ಸರ್ವೋತ್ತಮ ಶೆಟ್ಟಿ ಮತ್ತು ಶ್ರೀಮತಿ ಉಷ ಶೆಟ್ಟಿಯವರಿಗೆ ಅರ್ಪಿಸಿ ಗೌರವ ಸಲ್ಲಿಸಿ ಸನ್ಮಾನಿಸಲಾಯಿತು.ಶ್ರೀಮತಿ ಶಶಿ ರವಿರಾಜ್ ಶೆಟ್ಟಿ ಸನ್ಮಾನ ಪತ್ರ ವಾಚಿಸಿದರು,ನಿತೇಶ್ ಶೆಟ್ಟಿ ಎಕ್ಕಾರ್ ಮತ್ತು ನಮ್ಮ ಕುಡ್ಲ ಚಾನೆಲ್ ನ ವಾರ್ತಾ ವಾಚಕಿ ಶ್ರೀಮತಿ ಪ್ರೀಯ ಹರೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು ಕಾರ್ಯಕ್ರಮ ನಿರೂಪಿಸಿದರು.
ವರದಿ: ವಿಜಯಕುಮಾರ್ ಶೆಟ್ಟಿ ಗಾಣದಮೂಲೆ (ದುಬೈ)
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…