ದುಬೈ : ಮರಳು ಭೂಮಿಯಲ್ಲಿ ಕಳೆದ 47 ವರ್ಷದಿಂದ ಯುಎಇ ಬಂಟ್ಸ್ ನ ನಾಯಕನಾಗಿ ನಡೆಸಿಕೊಂಡು ಬರುತ್ತಿರುವ ಸರ್ವೋತ್ತಮ ಶೆಟ್ಟಿಯವರನ್ನು ಗಲ್ಫ್ ಬಂಟೋತ್ಸವ-2024 ಕಾರ್ಯಕ್ರಮದಲ್ಲಿ ವಿನೂತನ ರೀತಿಯಲ್ಲಿ ಸನ್ಮಾನಿಸಲಾಯಿತು.
ಸರ್ವೋತ್ತಮ ಶೆಟ್ಟಿ ದಂಪತಿಗಳನ್ನು ಬಂಟ್ಸ್ ನ ಸಂಘಟನ ಸಮಿತಿ ಹಾಗೂ ಸಲಹಾ ಸಮಿತಿ ಮತ್ತು ಕಾರ್ಯಕರ್ತರು ಸೇರಿ ಮಾಡಿದ ಅದ್ದೂರಿಯ ಸನ್ಮಾನದಲ್ಲಿ ಸಮಿತಿಯ ಪದಾಧಿಕಾರಿಗಳು,ಸರ್ವ ಸದಸ್ಯರು ಉಪಸ್ಥಿತರಿದ್ದರು.
ವಿನೂತನ ಶೈಲಿಯಲ್ಲಿ ಸನ್ಮಾನ: ಸರ್ವೋತ್ತಮ ಶೆಟ್ಟಿಯವರ ಸನ್ಮಾನದ ಪೇಟ,ಶಾಲು,ಸ್ಮರಣಿಕೆ,ಗೆಂದಳೆ ಸೀಯಳ,ಅಡಕೆ,ಬಾಳೆ ಗೊಣೆ,ತರಕಾರಿ ಬುಟ್ಟಿ,ಹಣ್ಣು ಹಂಪಲು,ಅಕ್ಕಿ ಮುಡಿ,ಭತ್ತ ಮುಡಿ,ಹಿಂಗಾರ,ಮಲ್ಲಿಗೆ ಹಾರ, ಬಣ್ಣದ ಕೊಡೆ,ಚೆಂಡೆ ವಾಲಗದೊಂದಿಗೆ ವೇದಿಕೆಗೆ ಮೆರವಣಿಗೆಯ ಮೂಲಕ ತರಲಾಯಿತು.
ವೇದಿಕೆಯಲ್ಲಿದ್ದ ಯುಎಇ ಬಂಟ್ಸ್ ನ ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿ,ಕಾರ್ಯದರ್ಶಿ ರವಿರಾಜ್ ಶೆಟ್ಟಿ, ಸಮಿತಿಯ ಪೋಷಕರು,ಸಂಘಟನ ಸಮಿತಿಯ ಪದಾಧಿಕಾರಿಗಳು ವ್ಯವಸ್ಥಿತವಾಗಿ ಒಂದೊಂದು ವಸ್ತುಗಳನ್ನು ಸರ್ವೋತ್ತಮ ಶೆಟ್ಟಿ ಮತ್ತು ಶ್ರೀಮತಿ ಉಷ ಶೆಟ್ಟಿಯವರಿಗೆ ಅರ್ಪಿಸಿ ಗೌರವ ಸಲ್ಲಿಸಿ ಸನ್ಮಾನಿಸಲಾಯಿತು.ಶ್ರೀಮತಿ ಶಶಿ ರವಿರಾಜ್ ಶೆಟ್ಟಿ ಸನ್ಮಾನ ಪತ್ರ ವಾಚಿಸಿದರು,ನಿತೇಶ್ ಶೆಟ್ಟಿ ಎಕ್ಕಾರ್ ಮತ್ತು ನಮ್ಮ ಕುಡ್ಲ ಚಾನೆಲ್ ನ ವಾರ್ತಾ ವಾಚಕಿ ಶ್ರೀಮತಿ ಪ್ರೀಯ ಹರೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು ಕಾರ್ಯಕ್ರಮ ನಿರೂಪಿಸಿದರು.
ವರದಿ: ವಿಜಯಕುಮಾರ್ ಶೆಟ್ಟಿ ಗಾಣದಮೂಲೆ (ದುಬೈ)
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…